alex Certify ವೈದ್ಯರ ನಿರ್ಲಕ್ಷ್ಯಕ್ಕೆ ತಾಯಿ -ಮಗು ಬಲಿಯಾದ ಘಟನೆ ಮಾಸುವ ಮೊದಲೇ ಮತ್ತೊಂದು ಎಡವಟ್ಟು; ಆಸ್ಪತ್ರೆ ಎದುರಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೈದ್ಯರ ನಿರ್ಲಕ್ಷ್ಯಕ್ಕೆ ತಾಯಿ -ಮಗು ಬಲಿಯಾದ ಘಟನೆ ಮಾಸುವ ಮೊದಲೇ ಮತ್ತೊಂದು ಎಡವಟ್ಟು; ಆಸ್ಪತ್ರೆ ಎದುರಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ತುಮಕೂರು: ವೈದ್ಯರ ನಿರ್ಲಕ್ಷದಿಂದಾಗಿ ಕಾರ್ ನಲ್ಲಿಯೇ ಮಹಿಳೆ ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ. ತುಮಕೂರು ಜಿಲ್ಲೆ ಪಾವಗಡ ತಾಲೂಕು ಆಸ್ಪತ್ರೆ ಮುಂದೆ ಅಮಾನವೀಯ ಘಟನೆ ನಡೆದಿದೆ.

ಪಾವಗಡ ತಾಲೂಕಿನ ಮಡಕಶಿರಾ ಹೋಬಳಿಯ ಪಿಲ್ಲಕುಂಟೆಯ ಲಕ್ಷ್ಮಿದೇವಿ ಮಗುವಿಗೆ ಜನ್ಮ ನೀಡಿದ್ದಾರೆ. ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಂಬುಲೆನ್ಸ್ ಗೆ ಕರೆ ಮಾಡಲಾಗಿದ್ದು, ಅಂಬುಲೆನ್ಸ್ ಬಾರದ ಹಿನ್ನೆಲೆಯಲ್ಲಿ ಕಾರ್ ನಲ್ಲಿಯೇ ಕುಟುಂಬದವರು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ.

ಆದರೆ, ಆಸ್ಪತ್ರೆಗೆ ಬಂದರೂ, ವೈದ್ಯರು ನಿರ್ಲಕ್ಷ ತೋರಿದ್ದರಿಂದ ಕಾರ್ ನಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾರೆ. ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ ನಂತರ ತಾಯಿ-ಮಗುವನ್ನು ಆಸ್ಪತ್ರೆಯ ಸಿಬ್ಬಂದಿ ಒಳಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಿದ್ದಾರೆ. ಕಳೆದವಾರ ವೈದ್ಯರ ನಿರ್ಲಕ್ಷ್ಯಕ್ಕೆ ತಾಯಿ-ಮಗು ಮೃತಪಟ್ಟಿದ್ದರು. ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಎಡವಟ್ಟು ನಡೆದಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...