alex Certify ಕುಡಿದ ಅಮಲಿನಲ್ಲಿ ಪತ್ನಿಯೊಂದಿಗೆ ಜಗಳವಾಡಿ ಹತ್ಯೆಗೈದ ಪತಿ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುಡಿದ ಅಮಲಿನಲ್ಲಿ ಪತ್ನಿಯೊಂದಿಗೆ ಜಗಳವಾಡಿ ಹತ್ಯೆಗೈದ ಪತಿ..!

ಬಾಗಲಕೋಟೆ: ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ಪತ್ನಿಯನ್ನೇ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಜಿಲ್ಲೆಯ ಇಳಕಲ್ ನಗರದ ಕವಿಶೆಟ್ಟಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಪತ್ನಿ ಮದೀನಾ(27) ಕೊಲೆಯಾದ ಮಹಿಳೆ. ಮೆಹಬೂಬ್ ಬಂಡಿ ಎಂಬುವವನೇ ಕೊಲೆ ಮಾಡಿದ ಆರೋಪಿ.

ಆರೋಪಿಯು ನಗರದಲ್ಲಿ ಪಾನಿಪೂರಿ ಮಾರಿ ಜೀವನ ಸಾಗಿಸುತ್ತಿದ್ದ. ಅಲ್ಲದೇ, ಪತಿ ಕುಡಿತದ ದಾಸನಾಗಿದ್ದರಿಂದಾಗಿ ಕುಟುಂಬ ನಿರ್ವಹಣೆಗಾಗಿ ಹಾಗೂ ಮಕ್ಕಳ ಶಾಲಾ ಖರ್ಚಿಗಾಗಿ ಪತ್ನಿ ಮದೀನಾ ಹೊಲಿಗೆ ಕೆಲಸ ಮಾಡಿಕೊಂಡಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ.

ಆದರೆ, ತಡರಾತ್ರಿ ಕುಡಿದ ಅಮಲಿನಲ್ಲಿ ಬಂದ ಮೆಹಬೂಬ್ ಪತ್ನಿಯೊಂದಿಗೆ ಜಗಳ ಮಾಡಿದ್ದಾನೆ. ಜಗಳ ವಿಕೋಪಕ್ಕೆ ತಿರುಗುತ್ತಿದ್ದಂತೆ ರಾಡ್ ನಿಂದ ತಲೆಗೆ ಹೊಡೆದಿದ್ದಾನೆ. ಹೊಡೆತದ ತೀವ್ರತೆಗೆ ಕುಸಿದು ಬಿದ್ದ ಮದೀನಾ, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಅಪ್ಪನ ಜೇಬಿನಿಂದ 50 ರೂ. ತೆಗೆದ ಮಗ; ಕೊಲೆ ಮಾಡಿದ ತಂದೆ..!

ಮಕ್ಕಳ ಎದುರೇ ಪತ್ನಿಯನ್ನು ಕೊಲೆ ಮಾಡಿದ್ದು, ಮಕ್ಕಳು ತಾಯಿಯ ಶವ ಕಂಡು ದಿಗ್ಬ್ರಾಂತರಾಗಿದ್ದಾರೆ. ಬಳಿಕ ಮಕ್ಕಳನ್ನು ಕೋಣೆಯಲ್ಲಿ ಕೂಡಿ ಹಾಕಿದ್ದಾನೆ. ಆ ನಂತರ ನಿದ್ರೆಗೆ ಜಾರಿದ್ದಾನೆ. ಮೆಹೆಬೂಬ್ ನಿದ್ರೆಗೆ ಜಾರುತ್ತಿದ್ದಂತೆ ಮಕ್ಕಳು ಮನೆಯಿಂದ ಹೊರಗೆ ಬಂದು, ಅಕ್ಕ-ಪಕ್ಕದ ಮನೆಯವರಿಗೆ ನಡೆದ ವಿಷಯ ಹೇಳಿದ್ದಾರೆ. ಸದ್ಯ ಸ್ಥಳಕ್ಕೆ ಇಳಕಲ್ ನಗರ ಪೊಲೀಸರು ಭೇಟಿ ನೀಡಿ, ತನಿಖೆ ಕೈಗೊಂಡಿದ್ದಾರೆ. ಆರೋಪಿ ಪರಾರಿಯಾಗಿದ್ದು, ಆತನ ಬಂಧನಕ್ಕೆ ಬಲೆ ಬೀಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...