alex Certify BIG BREAKING: ಶಾಲೆಯಿಂದ ಮನೆಗೆ ತೆರಳುವಾಗಲೇ ಘೋರ ದುರಂತ: ಕಾರ್ ಡಿಕ್ಕಿ; ಇಬ್ಬರು ಮಕ್ಕಳ ಸಾವು, ಮೂವರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಶಾಲೆಯಿಂದ ಮನೆಗೆ ತೆರಳುವಾಗಲೇ ಘೋರ ದುರಂತ: ಕಾರ್ ಡಿಕ್ಕಿ; ಇಬ್ಬರು ಮಕ್ಕಳ ಸಾವು, ಮೂವರಿಗೆ ಗಾಯ

ಬಾಗಲಕೋಟೆ: ಕಾರ್ ಡಿಕ್ಕಿಯಾಗಿ ವಿದ್ಯಾರ್ಥಿಗಳಿಬ್ಬರು ಸಾವು ಕಂಡಿದ್ದು, ಮೂವರು ಗಾಯಗೊಂಡ ಘಟನೆ ಕ್ಯಾದಿಗೇರಿ ಕ್ರಾಸ್ ಬಳಿ ನಡೆದಿದೆ.

ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಕ್ಯಾದಿಗೇರಿ ಕ್ರಾಸ್ ಬಳಿ ಅಪಘಾತ ಸಂಭವಿಸಿದ್ದು, ನೇತ್ರಾವತಿ ರಗಟಿ(14), ಅಂಜಲಿ ಸೂಡಿ(14) ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ ಮೂವರು ಗಾಯಗೊಂಡಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಶಾಲೆ ಮುಗಿಸಿ ಮನೆಗೆ ಹೋಗುತ್ತಿದ್ದ ವಿದ್ಯಾರ್ಥಿಗಳಿಗೆ ಕಾರ್ ಡಿಕ್ಕಿ ಹೊಡೆದಿದೆ. ಐಹೊಳೆಯಿಂದ ಚೆಲ್ಲಾಪುರಕ್ಕೆ 8 ನೇ ತರಗತಿ ವಿದ್ಯಾರ್ಥಿಗಳು ತೆರಳುತಿದ್ದರು. ಅಪಘಾತದ ಬಳಿಕ ಸ್ಥಳದಲ್ಲೇ ಕಾರ್ ನಿಲ್ಲಿಸಿ ಚಾಲಕ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಐಹೊಳೆ ಪ್ರವಾಸದಲ್ಲಿದ್ದ ತೋಟಗಾರಿಕೆ ಇಲಾಖೆ ಸಚಿವ ಮುನಿರತ್ನ ಭೇಟಿ ನೀಡಿದ್ದಾರೆ. ಅಮೀನಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...