alex Certify ಪರೀಕ್ಷೆ ಹೊತ್ತಲ್ಲೇ ಕೀ ಕಳೆದುಕೊಂಡ ಸಿಬ್ಬಂದಿ: ಬೀಗ ಒಡೆದು ಪರೀಕ್ಷಾ ಕೊಠಡಿ ಪ್ರವೇಶಿಸಿದ ಅಭ್ಯರ್ಥಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪರೀಕ್ಷೆ ಹೊತ್ತಲ್ಲೇ ಕೀ ಕಳೆದುಕೊಂಡ ಸಿಬ್ಬಂದಿ: ಬೀಗ ಒಡೆದು ಪರೀಕ್ಷಾ ಕೊಠಡಿ ಪ್ರವೇಶಿಸಿದ ಅಭ್ಯರ್ಥಿಗಳು

ಬಾಗಲಕೋಟೆ: ಪರೀಕ್ಷಾ ಕೇಂದ್ರದ ಕೊಠಡಿಯ ಬೀಗದ ಕೀ ಇಲ್ಲದ ಕಾರಣ ಕಲ್ಲಿನಿಂದ ಬೀಗ ಒಡೆದು ಅಭ್ಯರ್ಥಿಗಳು ಕೊಠಡಿ ಪ್ರವೇಶಿಸಿದ ಘಟನೆ ಬಾಗಲಕೋಟೆ ಜಿಲ್ಲೆ ಇಲಕಲ್ಲದಲ್ಲಿ ನಡೆದಿದೆ.

ಕೆಪಿಟಿಸಿಎಲ್ ಕಿರಿಯ ಸಹಾಯಕರ ಹುದ್ದೆಗಳ ನೇಮಕಾತಿಗೆ ಇಂದು ನಡೆದ ಪರೀಕ್ಷೆ ವೇಳೆ ಈ ಘಟನೆ ನಡೆದಿದೆ. ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಕೇಂದ್ರಕ್ಕೆ ಪರೀಕ್ಷೆ ಬರೆಯಲು ನೂರಾರು ಅಭ್ಯರ್ಥಿಗಳು ಆಗಮಿಸಿದ್ದರು. ಸಂಬಂಧಿಸಿದ ಸಿಬ್ಬಂದಿ ಬೇಗನೆ ಕೇಂದ್ರಕ್ಕೆ ಆಗಮಿಸಲಿಲ್ಲ. ಪರೀಕ್ಷಾ ಕೇಂದ್ರದ ರೂಮ್ ಗಳ ಬೀಗದ ಕೀ ಕಳೆದುಕೊಂಡಿರುವ ಬಗ್ಗೆ ಕಾಲೇಜು ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ಇದರಿಂದ ಆಕ್ರೋಶಗೊಂಡ ಸ್ಥಳೀಯರು ಹಾಗೂ ಪೋಷಕರು ಕಲ್ಲಿನಿಂದ ಬೀಗ ಒಡೆದು ಹಾಕಿ ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಅನುಕೂಲ ಮಾಡಿಕೊಟ್ಟಿದ್ದಾರೆ. ಬೆಳಗ್ಗೆ 10.30 ಕ್ಕೆ ಪರೀಕ್ಷೆ ನಿಗದಿಯಾಗಿತ್ತು. ಅಭ್ಯರ್ಥಿಗಳು, ಪೋಷಕರು 9 ಗಂಟೆಗೆ ಆಗಮಿಸಿದ್ದರು. ಆದರೆ, ಅಧಿಕಾರಿಗಳು ವಿಳಂಬವಾಗಿ ಬಂದು ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...