
ಬಾಗಲಕೋಟೆ: ಕೃಷ್ಣಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ನೀರು ಪಾಲಾದ ಘಟನೆ ಬಾಗಲಕೋಟೆ ತಾಲೂಕಿನ ಸೀತಿಮನಿ ಗ್ರಾಮದ ಸಮೀಪ ನಡೆದಿದೆ.
ಸೋಮಶೇಖರ ದೇವರಮನೆ(15), ಪರನಗೌಡ ಬಿಳಗಿ(17) ಹಾಗೂ ಮಲ್ಲಪ್ಪ ಬಗಲಿ(16) ನೀರು ಪಾಲಾದವರು ಎಂದು ಹೇಳಲಾಗಿದೆ.
ಮೂವರ ಪೈಕಿ ಬಾಲಕ ಸೋಮಶೇಖರ ಮೃತದೇಹ ಪತ್ತೆಯಾಗಿದೆ. ಉಳಿದ ಇಬ್ಬರಿಗಾಗಿ ಅಗ್ನಿಶಾಮಕ ದಳ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ. ಮೂವರು ಬಾಲಕರು ಬಾಗಲಕೋಟೆ ತಾಲೂಕಿನ ಇಲ್ಯಾಳ ನಿವಾಸಿಗಳಾಗಿದ್ದಾರೆ. ಬಾಗಲಕೋಟೆ ಗ್ರಾಮೀಣ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.