alex Certify BIG NEWS : ‘ಪಳನಿ ಮುರುಗನ್’ ದೇವಸ್ಥಾನಕ್ಕೆ ಹಿಂದೂಯೇತರರ ಪ್ರವೇಶ ನಿಷೇಧ : ಮದ್ರಾಸ್ ಹೈಕೋರ್ಟ್ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘ಪಳನಿ ಮುರುಗನ್’ ದೇವಸ್ಥಾನಕ್ಕೆ ಹಿಂದೂಯೇತರರ ಪ್ರವೇಶ ನಿಷೇಧ : ಮದ್ರಾಸ್ ಹೈಕೋರ್ಟ್ ಆದೇಶ

ಮಧುರೈ: ತಮಿಳುನಾಡಿನ ಜನಪ್ರಿಯ ಪಳನಿ ಮುರುಗನ್ ದೇವಸ್ಥಾನಕ್ಕೆ ಹಿಂದೂಯೇತರರು, ಇತರ ಧರ್ಮಗಳ ಜನರು ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ ಎಂದು ಮದ್ರಾಸ್ ಹೈಕೋರ್ಟ್ ನ ಮಧುರೈ ಶಾಖೆ ಮಂಗಳವಾರ ತೀರ್ಪು ನೀಡಿದೆ.

ಹಿಂದೂಯೇತರರಿಗೆ ಪ್ರವೇಶ ನಿಷೇಧ ಎಂಬ ಬ್ಯಾನರ್ ಗಳನ್ನು ದೇವಾಲಯದ ಆವರಣದ ಪ್ರವೇಶದ್ವಾರದಲ್ಲಿ ವಿವಿಧ ಸ್ಥಳಗಳಲ್ಲಿ ಹಾಕಬೇಕು ಎಂದು ನ್ಯಾಯಾಲಯ ಆದೇಶಿಸಿದೆ.

ದಿಂಡಿಗಲ್ ಜಿಲ್ಲೆಯ ಪಳನಿ ನಿವಾಸಿ ಸೆಂಥಿಲ್ ಕುಮಾರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಮೇರೆಗೆ ಈ ಆದೇಶ ಹೊರಡಿಸಲಾಗಿದೆ. ಪ್ರಸಿದ್ಧ ಪಳನಿ ಮುರುಗನ್ ದೇವಸ್ಥಾನಕ್ಕೆ ಪ್ರತಿದಿನ ಸಾವಿರಾರು ಜನರು ಭೇಟಿ ನೀಡುತ್ತಾರೆ ಎಂದು ಅವರು ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ. ಈ ಪರಿಸ್ಥಿತಿಯಲ್ಲಿ, ಹಿಂದೂ ಧರ್ಮವನ್ನು ಹೊರತುಪಡಿಸಿ ಇತರ ಧರ್ಮಗಳಿಗೆ ಸೇರಿದ ಜನರು ಅಥವಾ ದೇವರನ್ನು ನಂಬದವರು ಸಹ ದೇವಾಲಯವನ್ನು ಪ್ರವೇಶಿಸುತ್ತಾರೆ, ಇದು ದೇವರನ್ನು ನಂಬುವವರಿಗೆ ನೋವುಂಟು ಮಾಡುತ್ತದೆ. ಆದ್ದರಿಂದ, ಹಿಂದೂಯೇತರರಿಗೆ ದೇವಾಲಯಕ್ಕೆ ಪ್ರವೇಶಿಸಲು ಅವಕಾಶ ನೀಡಬಾರದು.

ಇತರ ಧರ್ಮಗಳ ಜನರಿಗೆ ದೇವಾಲಯಕ್ಕೆ ಪ್ರವೇಶಿಸಲು ಅವಕಾಶವಿಲ್ಲ ಎಂದು ಹೇಳುವ ಬ್ಯಾನರ್ ಅನ್ನು ದೇವಾಲಯದ ಅನೇಕ ಭಾಗಗಳಲ್ಲಿ ಹಾಕಬೇಕೆಂದು ಅವರು ಒತ್ತಾಯಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸ್ಮತಿ, ದೇವಾಲಯದ ಪ್ರವೇಶ ದ್ವಾರದಲ್ಲಿ ಹಾಜರಾತಿ ರಿಜಿಸ್ಟರ್ ಇಡುವಂತೆ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆಗೆ (ಎಚ್ಆರ್ ಮತ್ತು ಸಿಇ) ನಿರ್ದೇಶನ ನೀಡಿದರು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...