alex Certify BIG NEWS: 24 ಗಂಟೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ 16 ಕಡೆ ಅಪಘಾತ; ಐವರು ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 24 ಗಂಟೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ 16 ಕಡೆ ಅಪಘಾತ; ಐವರು ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ. ಕಳೆದ 24 ಗಂಟೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ 16 ಸ್ಥಳಗಳಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಐವರು ಸಾವನ್ನಪ್ಪಿದ್ದಾರೆ.

ಬೆಂಗಳೂರಿನ ರಾಜಾಜಿನಗರ, ಬಸವನಗುಡಿ, ಹೆಣ್ಣೂರು, ವೈಟ್ ಫೀಲ್ಡ್, ಹುಳಿಮಾವುಗಳಲ್ಲಿ ತಲಾ ಎರಡು ಸ್ಥಳಗಳಲ್ಲಿ ಅಪಘಾತ ಪ್ರಕರಣಗಳು ದಾಖಲಾಗಿವೆ. ಹೆಬ್ಬಾಳ, ಸದಾಶಿವನಗರ, ಕೆ.ಆರ್.ಪುರಂ ನಲ್ಲಿ ತಲಾ ಒಂದು ಅಪಘಾತ ಪ್ರಕರಣ ದಾಖಲಾಗಿದೆ.

ಒಂದೇ ದಿನದಲ್ಲಿ ಬೆಂಗಳೂರಿನಲ್ಲಿ 16 ಕಡೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆ, ಯುವಕ ಸೇರಿ ಐವರು ಸಾವನ್ನಪ್ಪಿದ್ದಾರೆ. ಒಟ್ಟು 15 ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...