alex Certify ಬ್ಯಾಂಕ್ ನಿಂದ 10 ಲಕ್ಷ ರೂ. ಬಿಡಿಸಿಕೊಂಡು ಬಂದ ರೈತನಿಗೆ ಬಿಗ್ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬ್ಯಾಂಕ್ ನಿಂದ 10 ಲಕ್ಷ ರೂ. ಬಿಡಿಸಿಕೊಂಡು ಬಂದ ರೈತನಿಗೆ ಬಿಗ್ ಶಾಕ್

ಚಿತ್ರದುರ್ಗ: ಬ್ಯಾಂಕ್ ನಿಂದ ಬಿಡಿಸಿಕೊಂಡು ಬಂದು ಕಾರ್ ನಲ್ಲಿ ಇಟ್ಟಿದ್ದ 10 ಲಕ್ಷ ರೂ. ದೋಚಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದ ಬ್ಯಾಂಕ್ ಆಫ್ ಬರೋಡಾ ಶಾಖೆ ಸಮೀಪ ನಡೆದಿದೆ.

ಹೊಸದುರ್ಗ ತಾಲ್ಲೂಕಿನ ಲಕ್ಕಿಹಳ್ಳಿಯ ಮುದ್ದಪ್ಪ ಬುಧವಾರ ಬೆಳಗ್ಗೆ ಕರ್ನಾಟಕ ಬ್ಯಾಂಕ್ ಶಾಖೆಯಲ್ಲಿ 10 ಲಕ್ಷ ರೂ. ಡ್ರಾ ಮಾಡಿದ್ದಾರೆ. ಹಣವನ್ನು ಕಾರ್ ನಲ್ಲಿ ಮುಂಭಾಗದ ಸೀಟ್ ಮೇಲೆ ಇಟ್ಟು ಮತ್ತೆ ಬ್ಯಾಂಕಿಗೆ ತೆರಳಿದ್ದಾರೆ. ಬ್ಯಾಂಕ್ ನಿಂದ ಅವರನ್ನು ಹಿಂಬಾಲಿಸಿ ಬಂದ ಕಳ್ಳರು ಕಾರ್ ಕಿಟಕಿಯ ಗಾಜು ಒಡೆದು ಹಣ ಇದ್ದ ಬ್ಯಾಗ್ ದೋಚಿ ಪರಾರಿಯಾಗಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆ ನಾಲೆ ನಿರ್ಮಾಣಕ್ಕಾಗಿ ಭೂಮಿ ಕಳೆದುಕೊಂಡಿದ್ದ ಮುದ್ದಪ್ಪ ಅವರಿಗೆ ಸರ್ಕಾರದಿಂದ ಪರಿಹಾರದ ಹಣ 19 ಲಕ್ಷ ರೂ. ನೀಡಲಾಗಿದೆ. ಅದರಲ್ಲಿ 10 ಲಕ್ಷ ರೂ.ಗಳನ್ನು ವ್ಯವಹಾರಕ್ಕಾಗಿ ಬಿಡಿಸಿಕೊಂಡು ಬಂದ ಸಂದರ್ಭದಲ್ಲಿ ಕಳವು ಮಾಡಲಾಗಿದೆ. ಹೊಸದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಹೆಚ್ಚುವರಿ ಎಸ್.ಪಿ. ಕುಮಾರಸ್ವಾಮಿ, ಡಿವೈಎಸ್ಪಿ ಚೈತ್ರಾ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...