alex Certify BIG BREAKING: ಕೇಂದ್ರ ಸರ್ಕಾರದ ಖಾಸಗೀಕರಣ ನೀತಿ ವಿರೋಧಿಸಿ 2 ದಿನಗಳ ಕಾಲ ಬ್ಯಾಂಕ್ ಮುಷ್ಕರಕ್ಕೆ ಕರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೇಂದ್ರ ಸರ್ಕಾರದ ಖಾಸಗೀಕರಣ ನೀತಿ ವಿರೋಧಿಸಿ 2 ದಿನಗಳ ಕಾಲ ಬ್ಯಾಂಕ್ ಮುಷ್ಕರಕ್ಕೆ ಕರೆ

2021-22ನೇ ಸಾಲಿನ ಕೇಂದ್ರ ಬಜೆಟ್​​ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​​ ಎರಡು ಸಾರ್ವಜನಿಕ ಬ್ಯಾಂಕ್​ಗಳನ್ನ ಖಾಸಗೀಕರಣಗೊಳಿಸಿದ್ದನ್ನ ವಿರೋಧಿಸಿ ಬ್ಯಾಂಕ್​​ ಯೂನಿಯನ್​ ಮಾರ್ಚ್​ 15ರಂದು ಎರಡು ದಿನಗಳ ಪ್ರತಿಭಟನೆಗೆ ಕರೆ ನೀಡಿದೆ.

ಕಳೆದ ವಾರ ಬಜೆಟ್​ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಹೂಡಿಕೆ ಯೋಜನೆಯ ಭಾಗವಾಗಿ ಎರಡು ಸಾರ್ವಜನಿಕ ವಲಯದ ಬ್ಯಾಂಕ್​ಗಳನ್ನ ಖಾಸಗೀಕರಣಗೊಳಿಸೋದಾಗಿ ಘೋಷಣೆ ಮಾಡಿದ್ದರು.

ಈ ಮೂಲಕ ಕಳೆದ ನಾಲ್ಕು ವರ್ಷಗಳಲ್ಲಿ ಒಟ್ಟು 14 ಸಾರ್ವಜನಿಕ ಬ್ಯಾಂಕ್​ಗಳನ್ನ ಸರ್ಕಾರ ಖಾಸಗೀಕರಣಕ್ಕೆ ವಿಲೀನಗೊಳಿಸಿದಂತಾಗಿದೆ.

ಈ ಸಂಬಂಧ ಮಂಗಳವಾರ ಸಭೆ ನಡೆಸಿದ ಬ್ಯಾಂಕ್​ ಒಕ್ಕೂಟ ಕೇಂದ್ರ ಸರ್ಕಾರದ ಖಾಸಗೀಕರಣ ಘೋಷಣೆಯನ್ನ ವಿರೋಧಿಸಲು ನಿರ್ಧರಿಸಿದೆ. ಹೀಗಾಗಿ ಮಾರ್ಚ್ 15 ಹಾಗೂ 16ರಂದು ಮುಷ್ಕರಕ್ಕೆ ಕರೆ ನೀಡಿದ್ದೇವೆ ಎಂದು ಅಖಿಲ ಭಾರತ ಬ್ಯಾಂಕ್​ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಸಿ. ಹೆಚ್​ ವೆಂಕಟಾಚಲಂ ತಿಳಿಸಿದ್ದಾರೆ.

— ET NOW (@ETNOWlive) February 9, 2021

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...