alex Certify ಕಾಂಗ್ರೆಸ್ ಬಣ್ಣ ಬದಲಾಯಿಸಿದೆ, ಜನರ ನಿರೀಕ್ಷೆ ಹುಸಿಯಾಗಿದೆ: ಮಾಜಿ ಸಿಎಂ ಬೊಮ್ಮಾಯಿ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಬಣ್ಣ ಬದಲಾಯಿಸಿದೆ, ಜನರ ನಿರೀಕ್ಷೆ ಹುಸಿಯಾಗಿದೆ: ಮಾಜಿ ಸಿಎಂ ಬೊಮ್ಮಾಯಿ ಆರೋಪ

ಬೆಂಗಳೂರು: ಕಾಂಗ್ರೆಸ್ ತನ್ನ ಬಣ್ಣ ಬದಲಾಯಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಮೊದಲ ಸಚಿವ ಸಂಪುಟ ಸಭೆ ನಡೆದಿದೆ. ಗ್ಯಾರಂಟಿ ಯೋಜನೆಗಳ ಘೋಷಣೆ ಬಗ್ಗೆ ಜನ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದರು. ಐದು ಗ್ಯಾರಂಟಿಗಳ ಬಗ್ಗೆ ಮುಖ್ಯಮಂತ್ರಿ ಸರಿಯಾಗಿ ಸ್ಪಷ್ಟನೆ ನೀಡಿಲ್ಲ. ಯಾವಾಗ ಐದು ಗ್ಯಾರಂಟಿ ಜಾರಿ ಎಂಬುದರ ಬಗ್ಗೆ ವಿವರಣೆ ನೀಡಿಲ್ಲ. ಸಂಪುಟ ಸಭೆಯಲ್ಲಿ ಜನರ ನಿರೀಕ್ಷೆಗಳನ್ನು ಹುಸಿಗೊಳಿಸಿದ್ದಾರೆ ಎಂದು ಹೇಳಿದ್ದಾರೆ.

ಬಿಜೆಪಿ ಸರ್ಕಾರ 3 ಲಕ್ಷ ಕೋಟಿ ರೂ. ಸಾಲ ಮಾಡಿದೆ ಎಂದು ಸಿಎಂ ಆರೋಪಿಸಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ, ಇದಕ್ಕೆ ಅಧಿವೇಶನದಲ್ಲೇ ನಾವು ಉತ್ತರ ಕೊಟ್ಟಿದ್ದೇವೆ ಎಂದು ಹೇಳಿದ್ದಾರೆ.

ಕೋವಿಡ್ ನಿಂದಾಗಿ ರಾಜ್ಯದಲ್ಲಿ ಈ ವರ್ಷ ಸಾಲ ಹೆಚ್ಚಾಗಿದೆ. ರಾಜ್ಯದ ಹಲವಾರು ಅಭಿವೃದ್ಧಿ ಕಾರ್ಯಗಳು ಸ್ಥಗಿತವಾಗಲಿವೆ. ಕಾಂಗ್ರೆಸ್ ಗ್ಯಾರಂಟಿ, ಘೋಷಣೆಯಾಗಿಯೇ ಉಳಿಯಲಿದೆ. ಇನ್ನೊಂದು ಸಂಪುಟ ಸಭೆಯವರೆಗೂ ಕಾದು ನೋಡೋಣ ಎಂದು ಬೊಮ್ಮಾಯಿ ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Tipy, jak ušetřit Za měsíc budete nepoznateľní: Táto Jak správně prát podprsenku, aby si nesedla Jak snížit hladinu kofeinu v Jak čistit závěsy bez jejich sundání: užitečné tipy pro hostesky Co dělat, když se