alex Certify BIG NEWS: ಜೂನ್ 4ರ ಬಳಿಕ ಕಾಂಗ್ರೆಸ್ ನಲ್ಲಿ ಭಾರೀ ಬದಲಾವಣೆಯಾಗಲಿದೆ; ಮಾಜಿ ಸಿಎಂ ಬೊಮ್ಮಾಯಿ ಭವಿಷ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜೂನ್ 4ರ ಬಳಿಕ ಕಾಂಗ್ರೆಸ್ ನಲ್ಲಿ ಭಾರೀ ಬದಲಾವಣೆಯಾಗಲಿದೆ; ಮಾಜಿ ಸಿಎಂ ಬೊಮ್ಮಾಯಿ ಭವಿಷ್ಯ

ಕಲಬುರ್ಗಿ: ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಕಾಂಗ್ರೆಸ್ ನಲ್ಲಿ ಸಾಕಷ್ಟು ಬದಲಾವಣೆಯಾಗಲಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ.

ಕಲಬುರ್ಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ಜೂನ್ 4ರ ಬಳಿಕ ಕಾಂಗ್ರೆಸ್ ನಲ್ಲಿ ಸಾಕಷ್ಟು ಬದಲಾವಣೆಯಾಗಲಿದೆ. ಸಿಎಂ ಹಾಗೂ ಡಿಸಿಎಂ ನಡುವಿನ ಆಂತರಿಕ ಕಲಹ, ಸಚಿವರ ಅಸಮಾಧಾನದಿಂದಾಗಿಯೇ ಸರ್ಕಾರ ಉರುಳಲಿದೆ ಎಂದು ಹೇಳಿದ್ದಾರೆ.

ಚುನಾವಣೆ ಸಮಯದಲ್ಲಿ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆ ಗಮನಿಸಿದರೆ ವೈಯಕ್ತಿಕ ಪ್ರತಿಷ್ಠೆಯ ಪೈಪೋಟಿ ತೀವ್ರಗೊಂಡಿದೆ ಎಂಬುದು ಸ್ಪಷ್ಟವಾಗುತ್ತದೆ. ಲೋಕಸಭಾ ಚುನಾವಣೆಯಲ್ಲಿ ಹಲವು ಸಚಿವರು ತಾವು ಸ್ಪರ್ಧಿಸುವ ಬದಲು ತಮ್ಮ ಮಕ್ಕಳನ್ನು ಕಣಕ್ಕಿಳಿಸಿದ್ದಾರೆ. ಇದು ಅವರ ಹತಾಶೆಯ ಮತ್ತೊಂದು ಪ್ರತೀಕ. ಯಾಕೆಂದರೆ ರಾಜ್ಯದಲ್ಲಿ ರಾಜಕೀಯ ವಾತಾವರಣ ತಮಗೆ ಪ್ರತಿಕೂಲವಾಗಿದೆ ಎಂಬುದು ಅವರಿಗೆ ಗೊತ್ತಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...