alex Certify BIG NEWS: ಪರಿಷತ್ ನೂತನ ಸಭಾಪತಿಯಾಗಿ ಹೊರಟ್ಟಿ ಆಯ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪರಿಷತ್ ನೂತನ ಸಭಾಪತಿಯಾಗಿ ಹೊರಟ್ಟಿ ಆಯ್ಕೆ

ಬೆಳಗಾವಿ: ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಬಿಜೆಪಿ ಎಂ ಎಲ್ ಸಿ ಬಸವರಾಜ್ ಹೊರಟ್ಟಿ ಆಯ್ಕೆಯಾಗಿದ್ದಾರೆ.

ಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆ ಹೊರಟ್ಟಿ ಅವರನ್ನು ಚುನಾಯಿಸುವಂತೆ ತೇಜಸ್ವಿನಿಗೌಡ, ಶಂತಾರಾಂ ಸಿದ್ದಿ, ವೈ ಎ ನಾರಾಯಣಸ್ವಾಮಿ ಮೊದಲಾದವರು ಪ್ರಸ್ತಾಪಕ್ಕೆ ಸೂಚಿಸಿದರು. ಪ್ರಸ್ತಾವಕ್ಕೆ ಅನುಮೋದಿಸಿದ ಆಯನೂರು ಮಂಜುನಾಥ್, ಆರ್.ಶಂಕರ್, ಎಸ್.ವಿ.ಸಂಕನೂರ್, ಪ್ರದೀಪ್ ಶೆಟ್ಟರ್ ಪರಿಷತ್ ನೂತನ ಸಭಾಪತಿಯಾಗಿ ಹೊರಟ್ಟಿಯವರನ್ನು ಆಯ್ಕೆ ಮಾಡಿದ್ದಾರೆ.

ಸಭಾ ನಾಯಕ, ಸಿಎಂ ಬೊಮ್ಮಾಯಿ, ವಿಪಕ್ಷ ನಾಯಕರು ಬಸವರಾಜ್ ಹೊರಟ್ಟಿಯವರನ್ನು ಸಭಾಧ್ಯಕ್ಷರ ಪೀಠದತ್ತ ಕರೆತಂದರು. ಈ ಮೂಲಕ ಪರಿಷತ್ ನೂತನ ಸಭಾಪತಿಯಾಗಿ ಹೊರಟ್ಟಿ ಆಯ್ಕೆಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...