alex Certify BBMP ಕಸದ ಲಾರಿಗೆ ಮತ್ತೊಂದು ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BBMP ಕಸದ ಲಾರಿಗೆ ಮತ್ತೊಂದು ಬಲಿ

ಬೆಂಗಳೂರು: ಬಿಬಿಎಂಪಿ ಕಸದ ಲಾರಿಗೆ ಬಾಲಕಿಯೊಬ್ಬಳು ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದೆ. ಪಾಲಿಕೆ ಕಸದ ಲಾರಿಗೆ 60 ವರ್ಷದ ವ್ಯಕ್ತಿಯೋರ್ವರು ಬಲಿಯಾಗಿರುವ ಘಟನೆ ಬೆಂಗಳೂರಿನ ಬಾಗಲೂರು ಕ್ರಾಸ್ ಬಳಿ ನಡೆದಿದೆ.

ರಾಮಯ್ಯ (60) ಮೃತ ವ್ಯಕ್ತಿ. ಬೈಕ್ ನಲ್ಲಿ ತೆರಳುತ್ತಿದ್ದ ರಾಮಯ್ಯ ಅವರಿಗೆ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದಿದ್ದು, ನೆಲಕ್ಕೆ ಬಿದ್ದ ಅವರ ಮೇಲೆಯೇ ಲಾರಿ ಹರಿದು ಹೋಗಿದೆ. ಪರಿಣಾಮ ರಾಮಯ್ಯ ದೇಹ ಛಿದ್ರ ಛಿದ್ರಗೊಂಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸಂಪಿಗೆ ಹಳ್ಳಿ ನಿವಾಸಿಯಾಗಿದ್ದ ರಾಮಯ್ಯ, ಕೆಲಸದ ನಿಮಿತ್ತ ಸಾತನೂರಿಗೆ ತೆರಳಿದ್ದರು. ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಘಟನೆ ಬಳಿಕ ಕಸದ ಲಾರಿ ಸಮೇತ ಚಾಲಕ ಪರಾರಿಯಾಗಿದ್ದಾನೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...