alex Certify ತಡರಾತ್ರಿ ಬೆಂಗಳೂರಲ್ಲಿ ಭೀಕರ ಅಪಘಾತ: ನವವಿವಾಹಿತ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಡರಾತ್ರಿ ಬೆಂಗಳೂರಲ್ಲಿ ಭೀಕರ ಅಪಘಾತ: ನವವಿವಾಹಿತ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಬಿಬಿಎಂಪಿ ಕಸದ ಲಾರಿಗೆ ನವ ವಿವಾಹಿತ ಬಲಿಯಾಗಿದ್ದಾರೆ. ಜಯನಗರದ ಮೆಟ್ರೋ ಸ್ಟೇಷನ್ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಯಲಚೇನಹಳ್ಳಿಯ ಬೈಕ್ ಸವಾರ ಯಶವಂತ್(26) ಮೃತಪಟ್ಟವರು ಎಂದು ಹೇಳಲಾಗಿದೆ. ರಸ್ತೆಯಲ್ಲಿ ಅವೈಜ್ಞಾನಿಕವಾಗಿ ಕಸದ ಲಾರಿಯನ್ನು ಚಾಲಕ ಪಾರ್ಕಿಂಗ್ ಮಾಡಿದ್ದಾನೆ. ಬೈಕ್ ನಿಯಂತ್ರಣ ಸಿಗದೇ ಲಾರಿ ಹಿಂಬದಿಗೆ ಡಿಕ್ಕಿಯಾಗಿ ಯಶವಂತ್ ಮೃತಪಟ್ಟಿದ್ದಾರೆ.

ಜಯನಗರದ ಮೆಟ್ರೋ ಸ್ಟೇಷನ್ ರಸ್ತೆಯಲ್ಲಿ ರಾತ್ರಿ 12 ಗಂಟೆಗೆ ಘಟನೆ ನಡೆದಿದೆ. ಅವೈಜ್ಞಾನಿಕವಾಗಿ ಲಾರಿ ಪಾರ್ಕಿಂಗ್ ಮಾಡಿದ್ದೆ ಘಟನೆಗೆ ಕಾರಣ ಎನ್ನಲಾಗಿದೆ. ಮೂರು ಗಂಟೆ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಪೋಲೀಸರು ಹೊರಗೆ ತೆಗೆದಿದ್ದಾರೆ. ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ. ಜಯನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...