alex Certify ಪಠ್ಯ ಪರಿಷ್ಕರಣೆ ಬಗ್ಗೆ ಸಿಎಂ ಜೊತೆಗಿನ ಸಭೆ ಬಳಿಕ ಸಚಿವ ನಾಗೇಶ್ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಠ್ಯ ಪರಿಷ್ಕರಣೆ ಬಗ್ಗೆ ಸಿಎಂ ಜೊತೆಗಿನ ಸಭೆ ಬಳಿಕ ಸಚಿವ ನಾಗೇಶ್ ಮುಖ್ಯ ಮಾಹಿತಿ

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದ್ದರು. ಪತ್ರದಲ್ಲಿರುವ ಅಂಶಗಳ ಬಗ್ಗೆ ವಿವರಣೆಗಾಗಿ ನಮ್ಮನ್ನು ಮುಖ್ಯಮಂತ್ರಿಗಳು ಕರೆದಿದ್ದರು. ಸಿಎಂಗೆ ಎಲ್ಲ ವಿವರಣೆ ನೀಡಿದ್ದೇವೆ ಎಂದು ಮುಖ್ಯಮಂತ್ರಿಯವರ ಜೊತೆ ಸಭೆಯ ನಂತರ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.

ಬೆಂಗಳೂರಿನ ಆರ್.ಟಿ. ನಗರದ ಸಿಎಂ ನಿವಾಸದಲ್ಲಿ ಸಭೆ ಬಳಿಕ ಮಾತನಾಡಿದ ಅವರು, ಕೆಲವೊಂದು ವಿಚಾರಗಳಿಗೆ ನಾಳೆ ವಿವರಣೆ ಕೊಡುತ್ತೇವೆ. ಮಾಜಿ ಪ್ರಧಾನಿ ದೇವೇಗೌಡರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು. ಹಾಗಾಗಿ ಸಿಎಂ ಅವರೇ ನಾಳೆ ಉತ್ತರ ನೀಡುತ್ತಾರೆ. ಜೂನ್ 15 ರಂದು ನಾವು ಒಂದು ಸುತ್ತೋಲೆಯನ್ನು ಪ್ರಕಟಿಸಿದ್ದೆವು. ನಮ್ಮ ಸುತ್ತೋಲೆಯಲ್ಲಿ ಎಲ್ಲವನ್ನು ವಿವರವಾಗಿ ತಿಳಿಸಿದ್ದೇವೆ. ಪಠ್ಯದಲ್ಲಿ ಬಿಟ್ಟುಹೋಗಿರುವ ಅಂಶಗಳನ್ನು ಸೇರಿಸಲಾಗಿದೆ. ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಎಂದು ಉಲ್ಲೇಖಿಸಲಾಗಿದೆ. ಅಂಬೇಡ್ಕರ್ ಚಿಂತನೆ ಸೇರಿಸಿರುವ ಅಂಶ ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...