alex Certify 1 ರಿಂದ 5 ನೇ ತರಗತಿ ಆರಂಭ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಅಧಿವೇಶನ ನಂತರ ಶಾಲೆ ಆರಂಭ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

1 ರಿಂದ 5 ನೇ ತರಗತಿ ಆರಂಭ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಅಧಿವೇಶನ ನಂತರ ಶಾಲೆ ಆರಂಭ ಸಾಧ್ಯತೆ

ಯಾದಗಿರಿ: ವಿಧಾನ ಮಂಡಲ ಅಧಿವೇಶನ ಮುಗಿದ ನಂತರ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿ ಶಾಲೆ ಆರಂಭಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಸದ್ಯಕ್ಕೆ ಶಾಲೆ ಆರಂಭಿಸುವ ಕುರಿತು ಅವಸರವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.

ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಗಿದ ನಂತರ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಲಹೆ ಪಡೆದು, ಒಂದರಿಂದ ಐದನೇ ತರಗತಿ ಆರಂಭಿಸಲು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಸದ್ಯಕ್ಕೆ ಶಾಲೆ ಆರಂಭಿಸಲು ಅವಸರವೇನಿಲ್ಲ. ತಾಂತ್ರಿಕ ಸಲಹಾ ಸಮಿತಿ ಸಲಹೆ ಪಡೆದು ನಿರ್ಧಾರ ಕೈಗೊಳ್ಳಲಾಗುವುದು. ಅನುದಾನಿತ ಶಾಲೆಗಳಲ್ಲಿ 30 ರಷ್ಟು ಶುಲ್ಕ ಕಡಿತಕ್ಕೆ ಸರ್ಕಾರ ಆದೇಶ ಹೊರಡಿಸಿದ್ದು, ಹೈಕೋರ್ಟ್ ಶೇಕಡ 15 ಕ್ಕೆ ಇಳಿಕೆ ಮಾಡಿದೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...