ಮೈಸೂರು: ವಿವಾಹಿತ ಮಹಿಳೆ ಜೊತೆ ಅಕ್ರಮ ಸಂಬಂಧದ ಆರೋಪದ ಮೇಲೆ ಬೈಕ್ ನಲ್ಲಿ ತೆರಳುತ್ತಿದ್ದ ಮೂವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಲಾಗಿದೆ. ತಂದೆ-ಮಗ ಗಾಯಗೊಂಡಿದ್ದು, ಮಹಿಳೆ ಅದೃಷ್ಟವಶಾತ್ ಪಾರಾಗಿದ್ದಾರೆ.
ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ತಾಲೂಕಿನ ಮಾದಾಪುರ ಗ್ರಾಮದ ಬಳಿ ಘಟನೆ ನಡೆದಿದ್ದು, ಹಲ್ಲೆಯಲ್ಲಿ ಶಿವಪ್ಪ(45), ಅವರ ಮಗ ಶರತ್(20) ಗಾಯಗೊಂಡಿದ್ದಾರೆ. ಲೋಹಿತ್ ಕುಮಾರ್, ಪರಶಿವಮೂರ್ತಿ ಹಲ್ಲೆ ನಡೆಸಿದ್ದಾರೆನ್ನಲಾಗಿದೆ.
ವಿವಾಹಿತ ಮಹಿಳೆಯೊಂದಿಗೆ ಶರತ್ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಕುರಿತಂತೆ ಹಲವು ಬಾರಿ ರಾಜಿ ಪಂಚಾಯಿತಿ ಆಗಿತ್ತು. ತಂದೆ, ಮಗ, ಮಹಿಳೆ ಒಂದೇ ಬೈಕ್ ನಲ್ಲಿ ಹೋಗುವಾಗ ಮಚ್ಚಿನಿಂದ ಹಲ್ಲೆ ನಡೆಸಲಾಗಿದೆ. ಗಾಯಾಳುಗಳನ್ನು ಹೆಚ್.ಡಿ. ಕೋಟೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಹೆಚ್.ಡಿ. ಕೋಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.