alex Certify ಶ್ರೀಶೈಲದಲ್ಲಿ ಮತ್ತೆ ಕನ್ನಡಿಗರ ಮೇಲೆ ದೌರ್ಜನ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶ್ರೀಶೈಲದಲ್ಲಿ ಮತ್ತೆ ಕನ್ನಡಿಗರ ಮೇಲೆ ದೌರ್ಜನ್ಯ

ಆಂಧ್ರಪ್ರದೇಶದ ಶ್ರೀಶೈಲದಲ್ಲಿ ಮತ್ತೆ ಕನ್ನಡಿಗರ ಮೇಲೆ ದೌರ್ಜನ್ಯ ನಡೆಸಲಾಗಿದೆ. ಬಸ್ ಕಿಟಕಿ ಗಾಜು ಒಡೆದು, ಚಾಲಕ ಮತ್ತು ನಿರ್ವಾಹಕನ ಮೇಲೆ ದಾಳಿ ನಡೆಸಲಾಗಿದೆ.

ಕೆಎಸ್ಆರ್ಟಿಸಿ ಬಸ್ ಚಾಲಕ ಬಸವರಾಜ ಬಿರಾದಾರ್ ಅವರ ಮೇಲೆ ಹಲ್ಲೆ ಮಾಡಲಾಗಿದೆ. ವಿಜಯಪುರ ಡಿಪೋಗೆ ಸೇರಿದ ಬಸ್ ಚಾಲಕನ ಮೇಲೆ ಜೂನ್ 2 ರಂದು ರಾತ್ರಿ ಊಟ ಮಾಡಿ ಕಟ್ಟೆ ಮೇಲೆ ಮಲಗಿದ್ದಾಗ ಹಲ್ಲೆ ಮಾಡಲಾಗಿದೆ. ಕನ್ನಡಿಗರ ಬಗ್ಗೆ ಅಶ್ಲೀಲ ಪದ ಬಳಸಿ, ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ.

ಚಾಲಕನ ಮುಖ, ಕಾಲಿನ ಭಾಗಕ್ಕೆ ತೀವ್ರ ಹಲ್ಲೆಯಿಂದ ಗಾಯವಾಗಿ ರಕ್ತಸ್ರಾವವಾಗಿದೆ. ಚಾಲಕ ಬಸವರಾಜ  ಚೀರಾಟ ಕೇಳಿ ಸಿಬ್ಬಂದಿ ನೆರವಿಗೆ ಧಾವಿಸಿದ್ದಾರೆ. ಶ್ರೀಶೈಲ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಬಸವರಾಜ ಅವರನ್ನು ಸುನ್ನಿಪೇಠ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...