alex Certify ವೈದ್ಯರ ಚೀಟಿ ಇಲ್ಲದೆ ನಿದ್ದೆ ಮಾತ್ರೆ ಕೊಡಲು ನಿರಾಕರಿಸಿದ್ದಕ್ಕೆ ಯುವಕನಿಂದ ದುಷ್ಕೃತ್ಯ: ಮೆಡಿಕಲ್ ಶಾಪ್ ಗೆ ಹಾನಿ, ಮಾಲೀಕನ ಮೇಲೆ ಹಲ್ಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೈದ್ಯರ ಚೀಟಿ ಇಲ್ಲದೆ ನಿದ್ದೆ ಮಾತ್ರೆ ಕೊಡಲು ನಿರಾಕರಿಸಿದ್ದಕ್ಕೆ ಯುವಕನಿಂದ ದುಷ್ಕೃತ್ಯ: ಮೆಡಿಕಲ್ ಶಾಪ್ ಗೆ ಹಾನಿ, ಮಾಲೀಕನ ಮೇಲೆ ಹಲ್ಲೆ

ದಾವಣಗೆರೆ: ವೈದ್ಯರ ಚೀಟಿ ಇಲ್ಲದೆ ನಿದ್ದೆ ಮಾತ್ರೆ ಕೊಡಲು ನಿರಾಕರಿಸಿದ್ದಕ್ಕೆ ಯುವಕನೊಬ್ಬ ಮೆಡಿಕಲ್ ಶಾಪ್ ಗ್ಲಾಸ್ ಒಡೆದು ಹಾನಿಗೊಳಿಸಿ, ಮಾಲೀಕನ ಮೇಲೆ ಹಲ್ಲೆ ಮಾಡಿದ್ದಾನೆ.

ದಾವಣಗೆರೆ ಜಿಲ್ಲೆ ಹರಿಹರ ನಗರದ ಇಕ್ರಾ ಮೆಡಿಕಲ್ ಶಾಪ್ ನಲ್ಲಿ ಘಟನೆ ನಡೆದಿದೆ. ಮೆಡಿಕಲ್ ಶಾಪ್ ಮಾಲೀಕ ಅಮಾನುದ್ದೀನ್ ಮೇಲೆ ಯುವಕ ಹಲ್ಲೆ ಮಾಡಿದ್ದಾನೆ. ಹಲ್ಲೆ ಮಾಡಿ ಓಡಿ ಹೋಗುತ್ತಿದ್ದ ಯುವಕನನ್ನು ಹಿಡಿದ ಸ್ಥಳೀಯರು ಧರ್ಮದೇಟು ನೀಡಿದ್ದಾರೆ. ಯುವಕನಿಗೆ ಥಳಿಸಿ ಹರಿಹರ ನಗರ ಪೊಲೀಸರಿಗೆ ಒಪ್ಪಿಸಿದ್ದಾರೆ. ದಾವಣಗೆರೆ ನಗರದ ಆರೋಪಿ ಯುವಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...