alex Certify ದುಷ್ಕರ್ಮಿಗಳ ಅಟ್ಟಹಾಸ: ಮಗಳನ್ನು ಊರಿಗೆ ಕಳಿಸಿದ್ದಕ್ಕೆ ಪೋಷಕರ ಮೇಲೆ ಹಲ್ಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದುಷ್ಕರ್ಮಿಗಳ ಅಟ್ಟಹಾಸ: ಮಗಳನ್ನು ಊರಿಗೆ ಕಳಿಸಿದ್ದಕ್ಕೆ ಪೋಷಕರ ಮೇಲೆ ಹಲ್ಲೆ

ರಾಯಚೂರು: ಪ್ರೀತಿ ಪ್ರೇಮದ ಹೆಸರಲ್ಲಿ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಮಗಳನ್ನು ಊರಿಗೆ ಕಳಿಸಿದ್ದಕ್ಕೆ ಪೋಷಕರ ಮೇಲೆ ಹಲ್ಲೆ ನಡೆಸಲಾಗಿದೆ.

ಪೋಷಕರ ಮೇಲೆ ಪ್ರಣವ್ ಮತ್ತು ಸಹಚರರು ಕ್ರೌರ್ಯ ಮೆರೆದಿದ್ದಾರೆ. ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಆರ್.ಹೆಚ್. ಕ್ಯಾಂಪ್ 3ರಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಏಪ್ರಿಲ್ 14ರಂದು ಘಟನೆ ನಡೆದಿದೆ. ಯುವಕನಿಂದ ತಮ್ಮ ಮಗಳನ್ನು ಬೇರೆ ಮಾಡಿ ಊರಿಗೆ ಕಳಿಸಿದ್ದಕ್ಕೆ ಹಲ್ಲೆ ಮಾಡಲಾಗಿದೆ. ಯುವತಿ ಸಂಪರ್ಕಕ್ಕೆ ಸಿಗದಿದ್ದಾಗ ಮರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಹೀರಾರಾ ಮೋಹನ್ ಮತ್ತು ತಾಯಿ ಶ್ರುತಿ ಮಂಡಲ್, ಸಹೋದರ ಹಿಮಾಂಶು, ಸಂಬಂಧಿಯೊಬ್ಬರ ಮೇಲೆ ಹಲ್ಲೆ ಮಾಡಲಾಗಿದೆ. ಹೀರಾ ಮೋಹನ್ ಕಣ್ಣಿಗೆ ಕಲ್ಲಿನಿಂದ ಜಜ್ಜಿ ಗಾಯಗೊಳಿಸಿದ್ದಾರೆ. ಯುವತಿ ತಾಯಿಯ ಸೀರೆ ಎಳೆದಾಡಿ ಕ್ರೂರವಾಗಿ ಹಲ್ಲೆ ಮಾಡಿದ್ದಾರೆ. ಗ್ರಾಮದಲ್ಲಿ ಅಟ್ಟಾಡಿಸಿ ಯುವತಿಯ ತಂದೆ ಮೇಲೆ ಹಲ್ಲೆ ನಡೆಸಿದ್ದಾರೆ. ಯುವತಿಯನ್ನು ಮತ್ತೆ ಕರೆದುಕೊಂಡು ಬನ್ನಿ ಎಂದು ಹೇಳಿ ಹಲ್ಲೆ ಮಾಡಲಾಗಿದೆ. ಸಿಂಧನೂರು ಗ್ರಾಮಾಂತರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಒಳಗಾದವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...