alex Certify BIG NEWS: ಅಕ್ರಮವಾಗಿ ಗೋಮಾಂಸ ಸಾಗಾಟ; ವಾಹನಕ್ಕೆ ಬೆಂಕಿಯಿಟ್ಟ ಶ್ರೀರಾಮಸೇನೆ ಕಾರ್ಯಕರ್ತರು; ಸ್ಥಳದಲ್ಲಿ ಬಿಗುವಿನ ವಾತಾವರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಕ್ರಮವಾಗಿ ಗೋಮಾಂಸ ಸಾಗಾಟ; ವಾಹನಕ್ಕೆ ಬೆಂಕಿಯಿಟ್ಟ ಶ್ರೀರಾಮಸೇನೆ ಕಾರ್ಯಕರ್ತರು; ಸ್ಥಳದಲ್ಲಿ ಬಿಗುವಿನ ವಾತಾವರಣ

ಬೆಂಗಳೂರು: ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನವನ್ನು ತಡೆದು ಬೆಂಕಿ ಹಚ್ಚಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಬಳಿ ನಡೆದಿದೆ.

ಗೂಡ್ಸ್ ವಾಹನಗಳಲ್ಲಿ 15 ಟನ್ ಗೋಮಾಂಸವನ್ನು ಹಿಂದೂಪುರದಿಂದ ಬೆಂಗಳೂರಿನತ್ತ ಸಾಗಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ತಿಳಿದ ಶ್ರೀರಾಮಸೇನೆ ಕಾರ್ಯಕರ್ತರು ವಾಹನವನ್ನು ರಸ್ತೆ ಮಧ್ಯೆ ತಡೆದಿದ್ದಾರೆ. ಅಲ್ಲದೇ ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. 7 ವಾಹನಗಳಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ. ಅದನ್ನು ನಾವು ತಡೆದಿದ್ದೇವೆ. ಗೋಮಾಂಸ ಸಾಗಿಸುತ್ತಿದ್ದರೂ ಪೊಲೀಸರು ಮೌನವಾಗಿರುವುದೇಕೆ? ಸರ್ಕಾರಕ್ಕೆ ಗೊತ್ತಿಲ್ಲವೇ? ಸರ್ಕಾರ ಏನು ಮಾಡುತ್ತಿದೆ? ಎಂದು ಶ್ರೀರಾಮಸೇನೆ ಕಾರ್ಯಕರ್ತರು ಕಿಡಿಕಾರಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...