alex Certify BREAKING NEWS: ಭೀಕರ ಅಪಘಾತದಲ್ಲಿ ಮೂವರ ಸಾವು -ಹಿಂದಿನಿಂದ ಡಿಕ್ಕಿಹೊಡೆದ ಲಾರಿ, ನಿಯಂತ್ರಣ ತಪ್ಪಿ ಎದುರುಗಡೆ ಬರುತ್ತಿದ್ದ ಟ್ರಕ್ ಗೆ ಅಪ್ಪಳಿಸಿದ ಕಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಭೀಕರ ಅಪಘಾತದಲ್ಲಿ ಮೂವರ ಸಾವು -ಹಿಂದಿನಿಂದ ಡಿಕ್ಕಿಹೊಡೆದ ಲಾರಿ, ನಿಯಂತ್ರಣ ತಪ್ಪಿ ಎದುರುಗಡೆ ಬರುತ್ತಿದ್ದ ಟ್ರಕ್ ಗೆ ಅಪ್ಪಳಿಸಿದ ಕಾರ್

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಹಳ್ಳೂರು ಕ್ರಾಸ್ ಬಳಿ ನಡೆದ ಭೀಕರ ಸರಣಿ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ.

ಹಿಂಬದಿಯಿಂದ ಲಾರಿ ಗುದ್ದಿ ನಿಯಂತ್ರಣ ತಪ್ಪಿದ ಕಾರ್ ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಒಬ್ಬರು ಸಾವನ್ನಪ್ಪಿದ್ದು, ಆಸ್ಪತ್ರೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಶಾಂತಮ್ಮ, ಲಕ್ಷ್ಮಿ, ದುಂಡವ್ವ ಉಳ್ಳಾಗಡ್ಡಿ ಮೃತಪಟ್ಟವರು ಎಂದು ಹೇಳಲಾಗಿದೆ. ಕಾರು ಚಾಲಕ ಮತ್ತು ಸುನಂದಾ ಬಾಗೋಡಿ ಅಪಾಯದಿಂದ ಪಾರಾಗಿದ್ದಾರೆ. ಮೂಡಲಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...