alex Certify ಸೋರುತ್ತಿದ್ದ ಛಾವಣಿಗೆ ತಗಡಿನ ಶೀಟ್ ಹಾಕುವಾಗ ವಿದ್ಯುತ್ ಸ್ಪರ್ಶ: ಇಬ್ಬರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೋರುತ್ತಿದ್ದ ಛಾವಣಿಗೆ ತಗಡಿನ ಶೀಟ್ ಹಾಕುವಾಗ ವಿದ್ಯುತ್ ಸ್ಪರ್ಶ: ಇಬ್ಬರ ದುರ್ಮರಣ

ಬೆಳಗಾವಿ: ಬೆಳಗಾವಿ ತಾಲೂಕಿನ ಸುಳಗಾ ಗ್ರಾಮದಲ್ಲಿ ವಿದ್ಯುತ್ ಪ್ರವಹಿಸಿ ಇಬ್ಬರು ಮೃತಪಟ್ಟಿದ್ದಾರೆ. ವಿನಾಯಕ ಕೃಷ್ಣ(25), ಗೋಪಾಲ(57) ಮೃತಪಟ್ಟವರು ಎಂದು ಹೇಳಲಾಗಿದೆ. ಅವಘಡದಲ್ಲಿ ಮತ್ತೊಬ್ಬರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಭಾರಿ ಮಳೆಯಿಂದಾಗಿ ಸೋರುತ್ತಿದ್ದ ಛಾವಣಿ ಮೇಲೆ ತಗಡಿನ ಶೀಟ್ ಅಳವಡಿಸುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿದ್ದು ಬೆನಕನಹಳ್ಳಿಯ ಗೋಪಾಲ ಮತ್ತು ಸುಳಗಾದ ವಿನಾಯಕ ಕೃಷ್ಣ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇವರನ್ನು ರಕ್ಷಿಸಲು ಹೋದ ವ್ಯಕ್ತಿಗೆ ವಿದ್ಯುತ್ ತಗುಲಿದ್ದು, ಈ ವೇಳೆ ಆಯತಪ್ಪಿ ಛಾವಣಿಯಿಂದ ಕೆಳಗೆ ಬಿದ್ದ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...