alex Certify ತಡರಾತ್ರಿ ಪೊಲೀಸರಿಗೆ ಬಿಸಿ ಮುಟ್ಟಿಸಿದ ಎಸಿಬಿ: ಪೊಲೀಸ್ ಠಾಣೆಯಲ್ಲೇ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಪಿಎಸ್ಐ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಡರಾತ್ರಿ ಪೊಲೀಸರಿಗೆ ಬಿಸಿ ಮುಟ್ಟಿಸಿದ ಎಸಿಬಿ: ಪೊಲೀಸ್ ಠಾಣೆಯಲ್ಲೇ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಪಿಎಸ್ಐ

ಬೆಳಗಾವಿ: ಬೆಳಗಾವಿ ಜಿಲ್ಲೆ ಚಿಕ್ಕೋಡಿಯ ಸದಲಗಾ ಪೊಲೀಸ್ ಠಾಣೆಯ ಮೇಲೆ ರಾತ್ರಿ ಎಸಿಬಿ ದಾಳಿ ನಡೆಸಿದ್ದು, ಲಂಚ ಪಡೆಯುತ್ತಿದ್ದ ಪಿಎಸ್ಐ ಮತ್ತು ಇಬ್ಬರು ಕಾನ್ಸ್ ಟೇಬಲ್ ಗಳು ಬಲೆಗೆ ಬಿದ್ದಿದ್ದಾರೆ.

ಪಿಎಸ್ಐ ಮತ್ತು ಇಬ್ಬರು ಪೊಲೀಸರು ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಪಾನ್ ಮಸಾಲ ಕಾರ್ಖಾನೆ ಮಾಲೀಕ ರಾಜು ಎಂಬುವವರಿಗೆ ಇವರು ಹಣ ನೀಡುವಂತೆ ಬೆದರಿಕೆ ಹಾಕಿದ್ದರು. 50 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಬೋರಗಾಂವದ ಪಾನ್ ಮಸಾಲ ಕಾರ್ಖಾನೆ ಮಾಲೀಕ ರಾಜು ಅವರಿಗೆ ಹಣ ಕೇಳಿದ್ದು, ಅವರು ಎಸಿಬಿಗೆ ದೂರು ನೀಡಿದ್ದಾರೆ.

ತಡರಾತ್ರಿ 40 ಸಾವಿರ ರೂ. ಲಂಚ ಪಡೆಯುವಾಗಲೇ ಎಸಿಬಿ ದಾಳಿ ಮಾಡಿದೆ. ಈ ವೇಳೆ ಪಿಎಸ್ಐ ಮತ್ತು ಇಬ್ಬರು ಕಾನ್ ಸ್ಟೇಬಲ್ ಗಳು ಸಿಕ್ಕಿಬಿದ್ದಿದ್ದಾರೆನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Только гении могут найти Найдите 3 различия на картинках с зайцами для людей Как пройти по крыше: