alex Certify BIG NEWS: ಹೋಳಿ ಹಬ್ಬದ ಸಂಭ್ರಮದ ವೇಳೆ ಕನ್ನಡಿಗನ ಮೇಲೆ ನೇಪಾಳಿ ಪುಂಡರಿಂದ ಹಲ್ಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹೋಳಿ ಹಬ್ಬದ ಸಂಭ್ರಮದ ವೇಳೆ ಕನ್ನಡಿಗನ ಮೇಲೆ ನೇಪಾಳಿ ಪುಂಡರಿಂದ ಹಲ್ಲೆ

ಬೆಂಗಳೂರು: ಹೋಳಿ ಹಬ್ಬದ ಸಂಭ್ರಮದಲ್ಲಿ ತೊಡಗಿದ್ದ ನೇಪಾಳಿ ಮೂಲದ ಯುವಕರು ಕನ್ನಡಿಗನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಲಾಲ್ ಬಾಗ್ ನಲ್ಲಿ ನಡೆದಿದೆ.

ಅಮರ್ ಗಂಭೀರವಾಗಿ ಹಲ್ಲೆಗೊಳಗಾದ ಕನ್ನಡಿಗ. ಮಾರ್ಚ್ 14ರಂದು ಲಾಲ್ ಬಾಗ್ ಬಳಿ ಅಮರ್ ವ್ಯಾಪಾರ ನಡೆಸುತ್ತಿದ್ದ. ಈ ವೇಳೆ ಹೋಳಿ ಸಂಭ್ರಮಾಚರಣೆ ಎಂದು ಕಂಠಪೂರ್ತಿ ಕುಡಿದು, ಕುಣಿದು ಕುಪ್ಪಳಿಸುತ್ತಿದ್ದ ನೇಪಾಳಿ ಮೂಲದ ಯುವಕರ ಗುಂಪು ಅನಗತ್ಯವಾಗಿ ಕ್ಯಾತೆ ತೆಗೆದು ಗಲಾಟೆ ಶುರುಮಾಡಿದೆ. ಯುವಕರ ವರ್ತನೆ ಪ್ರಶ್ನಿಸಿದ್ದಕ್ಕೆ ಕನ್ನಡಿಗ ಅಮರ್ ಮೇಲೆ ನೇಪಾಳಿ ಯುವಕರ ಗುಂಪು ದೊಣ್ಣೆಯಿಂದ ಮನಬಂದಂತೆ ಹಲ್ಲೆ ನಡೆಸಿದೆ.

ರಕ್ತದ ಮಡುವಲ್ಲಿ ಬಿದ್ದು ಒದ್ದಾಡುತ್ತಿದ್ದರೂ ಮನಬಂದಂತೆ ಥಳಿಸಿದ್ದಾರೆ. ಈ ಘಟನೆ ಖಂಡಿಸಿ ಸ್ಥಳೀಯ ಕನ್ನಡಿಗರು ಸಿದ್ದಾಪುರ ಪೊಲೀಸ್ ಠಾಣೆಯ ಬಳಿ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಕನ್ನಡಿಗ ಅಮರ್ ಗೆ ನ್ಯಾಯಕೊಡಿಸಿಬೇಕು. ನೇಪಾಳಿ ಪುಂಡರ ಅಟ್ಟಹಾಸಕ್ಕೆ ಬ್ರೇಕ್ ಹಾಕಬೇಕು ಎಂದು ಒತ್ತಾಯಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...