alex Certify ಬೆಂಗಳೂರಿನಲ್ಲಿ ಘೋರ ದುರಂತ : ನೀರಿನ ಸಂಪ್ ಗೆ ಬಿದ್ದು 7 ವರ್ಷದ ಬಾಲಕ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿನಲ್ಲಿ ಘೋರ ದುರಂತ : ನೀರಿನ ಸಂಪ್ ಗೆ ಬಿದ್ದು 7 ವರ್ಷದ ಬಾಲಕ ಸಾವು

ಬೆಂಗಳೂರು :  ರಾಜಧಾನಿ ಬೆಂಗಳೂರಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ನಿರ್ಮಾಣ ಹಂತದ ಮನೆಯಲ್ಲಿನ ನೀರಿನ ಸಂಪ್‌ ಗೆ ಬಿದ್ದು ಏಳು ವರ್ಷದ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಂಗಳೂರಿನ ಗಂಗಮ್ಮನಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಯಾದಿಗಿರಿ ಮೂಲದ ಶಂಶುದ್ದೀನ್‌ ದಂಪತಿ ಕಟ್ಟಡ ಕಾರ್ಮಿಕರಾಗಿದ್ದು, ಅಬ್ಬಿಗೆರೆ ಶಿವಣ್ಣ ತೋಟದ ವ್ಯಾಪ್ತಿಯಲ್ಲಿ ಶೆಡ್‌ ನಿರ್ಮಿಸಿಕೊಂಡು ವಾಸಿಸುತ್ತಿದ್ದರು. ಶೆಡ್‌ ಮುಂಭಾಗ ಆಟವಾಡುತ್ತಿದ್ದ ಮಗು ನೀರಿನ ಸಂಪ್‌ ಗೆ ಬಿದ್ದು ಮೃತಪಟ್ಟಿದೆ.

ಶಬ್ಬೀರ್‌ (7) ಮೃತ ದುರ್ದೈವಿ. ಶಂಶುದೀನ್‌ ನೀಡಿದ ದೂರು ಆಧರಿಸಿ ಅಸಹಜ ಸಾವು ಪ್ರಕರಣ  ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...