alex Certify ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ್ದ ಹತ್ಯೆ ಪ್ರಕರಣ: ಅಕ್ರಮ ಸಂಬಂಧದಿಂದ ದೂರವಾದ್ರೂ ಮಹಿಳೆಗೆ ಕಾಟ ಕೊಡ್ತಿದ್ದ ಪ್ರಿಯಕರನ ಮೇಲೆ 20 ಬಾರಿ ಕಲ್ಲು ಎತ್ತಿಹಾಕಿ ಕೊಲೆಗೈದ 6 ಜನ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ್ದ ಹತ್ಯೆ ಪ್ರಕರಣ: ಅಕ್ರಮ ಸಂಬಂಧದಿಂದ ದೂರವಾದ್ರೂ ಮಹಿಳೆಗೆ ಕಾಟ ಕೊಡ್ತಿದ್ದ ಪ್ರಿಯಕರನ ಮೇಲೆ 20 ಬಾರಿ ಕಲ್ಲು ಎತ್ತಿಹಾಕಿ ಕೊಲೆಗೈದ 6 ಜನ ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿ ಅಗ್ರಹಾರ ಠಾಣೆ ಪೊಲೀಸರು ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ.

ಪ್ರೇಮವ್ವ, ಅಕ್ಕಮಹಾದೇವಿ, ಮಂಜುನಾಥ, ಕಿರಣ್, ಚೆನ್ನಪ್ಪ, ಕಾಶೀನಾಥ ಎಂಬುವರನ್ನು ಬಂಧಿಸಲಾಗಿದೆ. ಡಿಸೆಂಬರ್ 3 ರಂದು ರಾತ್ರಿ ವೇಳೆ ಮಂಜುನಾಥ್ ಎಂಬುವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಹತ್ಯೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

ಸರೋಜಾ ಜೊತೆಗೆ ಹತ್ಯೆಯಾದ ಮಂಜುನಾಥ್ ಸಂಬಂಧ ಇಟ್ಟುಕೊಂಡಿದ್ದ. ಕೆಲವು ಕಾರಣಗಳಿಂದ ಮಂಜುನಾಥ್ ಮತ್ತು ಸರೋಜಾ ದೂರವಾಗಿದ್ದರು. ಆದರೂ ಸರೋಜಾಗೆ ಮಂಜುನಾಥ್ ಪದೇ ಪದೇ ಕರೆ ಮಾಡಿ ಕಾಟ ಕೊಡುತ್ತಿದ್ದ.

ಮಾತನಾಡುವ ನೆಪದಲ್ಲಿ ಮಂಜುನಾಥ್ ನನ್ನು ಕರೆಸಿಕೊಂಡು ಕೊಲೆ ಮಾಡಲಾಗಿದೆ. ಮಂಜುನಾಥ್ ತಲೆ ಮೇಲೆ 20 ಬಾರಿ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿತ್ತು. ಕೆಪಿ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 6 ಜನರನ್ನು ಬಂಧಿಸಿರುವ ಪೊಲೀಸರು ತಲೆಮರೆಸಿಕೊಂಡಿರುವ ಸರೋಜಾಗಾಗಿ ಶೋಧ ಕಾರ್ಯ ಕೈಗೊಂಡಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...