alex Certify ‘ಬೆಂಗಳೂರು ಬಂದ್’ ಶಾಂತಿಯುತವಾಗಿ ಆಗಿದೆ, ಎಲ್ಲರಿಗೂ ಧನ್ಯವಾದಗಳು : ಡಿಸಿಎಂ ಡಿಕೆಶಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಬೆಂಗಳೂರು ಬಂದ್’ ಶಾಂತಿಯುತವಾಗಿ ಆಗಿದೆ, ಎಲ್ಲರಿಗೂ ಧನ್ಯವಾದಗಳು : ಡಿಸಿಎಂ ಡಿಕೆಶಿ

ಬೆಂಗಳೂರು : ಬೆಂಗಳೂರು ಬಂದ್ ಶಾಂತಿಯುತವಾಗಿ ಆಗಿದೆ, ಎಲ್ಲರಿಗೂ ಧನ್ಯವಾದಗಳು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ ಡಿಕೆಶಿ ಬೆಂಗಳೂರು ಬಂದ್ ಯಶಸ್ವಿಯಾಗಿದೆ, ಎಲ್ಲಾ ಬೆಂಗಳೂರು ನಾಗರಿಕರಿಗೆ ನನ್ನ ಅಭಿನಂದನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಪ್ರತಿಭಟನೆ ಮಾಡಲಿ, ಅವರ ಧ್ವನಿ ಹೋರಾಟ ನಡೆಯಲಿ, ಸಂಘಟನೆಯವರಿಗೆ ಅಭಿನಂದನೆಗಳು ಎಂದರು.ರಾಜ್ಯದ ಹಿತಕ್ಕೆ ನಾವು ಕೆಲಸ ಮಾಡುತ್ತೇವೆ. ಅವರು 12,500 ಕ್ಯೂಸೆಕ್ ನೀರು ಕೇಳಿದ ತಕ್ಷಣ ಕೊಡಲು ಆಗಲ್ಲ. ಅದಕ್ಕೆ ಲೆಕ್ಕಾಚಾರ ಇದೆ. 5,000 ಕ್ಯೂಸೆಕ್ ನೀರು ಬಿಡಲು ಕಷ್ಟವಾಗುತ್ತಿದೆ ಎಂದರು.

ತಮಿಳುನಾಡಿಗೆ ಮತ್ತೆ 3000 ಕ್ಯೂಸೆಕ್ ನೀರು ಹರಿಸುವಂತೆ CWRC ( ಕಾವೇರಿ ನೀರು ನಿಯಂತ್ರಣ ಸಮಿತಿ) ಆದೇಶ ಹೊರಡಿಸಿದೆ.18 ದಿನ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ CWRC ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಹೊರಡಿಸಿದೆ. ಈ ಮೂಲಕ ಕರ್ನಾಟಕಕ್ಕೆ ಮತ್ತೆ ಶಾಕ್ ಎದುರಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...