alex Certify BIG NEWS: ಮತ್ತೆ ಬೆಂಗಳೂರು ಬಂದ್..? ಇಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮಹತ್ವದ ಸಭೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತ್ತೆ ಬೆಂಗಳೂರು ಬಂದ್..? ಇಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರು: ನೆಲ-ಜಲ ಭಾಷೆ ವಿಚಾರ ಬಂದಾಗ ಬೆಂಗಳೂರಿನ ಬಹುತೇಕರು ಹೋರಾಟ ಮಾಡುವುದಿಲ್ಲ. ಹೀಗಾಗಿ ಹೋರಾಟಗಳಿಗೆ ಬೆಂಬಲ ನೀಡದ ಬೆಂಗಳೂರಿನ ಜನರಿಗೆ ಬುದ್ಧಿ ಕಲಿಸಲು ಪ್ಲಾನ್ ಮಾಡಿಕೊಂಡು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮತ್ತೆ ಬೆಂಗಳೂರು ಬಂದ್ ನಡೆಸಲು ಚಿಂತನೆ ನಡೆಸಲಾಗಿದೆ ಎನ್ನಲಾಗಿದೆ.

ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳೊಂದಿಗೆ ಇಂದು ಖಾಸಗಿ ಹೋಟೆಲ್ ನಲ್ಲಿ ವಾಟಾಳ್ ನಾಗರಾಜ್ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳ ಮುಖಂಡರೊಂದಿಗೆ ಚರ್ಚೆ ನಡೆಸಿ ಬೆಂಗಳೂರು ಬಂದ್ ಮಾಡುವ ಬಗ್ಗೆ ಚರ್ಚೆ ನಡೆಸಲಾಗುವುದು.

ಕಾವೇರಿ ವಿಚಾರ, ರೈತರು, ಕನ್ನಡ ನೆಲ, ಜಲ, ಭಾಷೆ ವಿಚಾರದಲ್ಲಿ ಬೆಂಗಳೂರಿನ ಹೆಚ್ಚಿನ ಸಂಖ್ಯೆಯ ಜನ ಬೆಂಬಲ ನೀಡದ ಕಾರಣ ಮತ್ತೊಮ್ಮೆ ಬೆಂಗಳೂರು ಬಂದ್ ಮಾಡಲು ರೂಪುರೇಷೆ ಬಗ್ಗೆ ಚರ್ಚೆ ನಡೆಸಿ ಬಂದ್ ಗೆ ಕರೆ ನೀಡಲಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...