
ಬೆಂಗಳೂರು: ಬೆಂಗಳೂರಿನಲ್ಲಿ ಬಿಲ್ಡರ್, ಕಟ್ಟಡದ ಮಾಲೀಕನ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಬಿಲ್ಡರ್ ಅಶೋಕ್ ಮತ್ತು ಕಟ್ಟಡದ ಮಾಲೀಕ ಶಿವಾ ರೆಡ್ಡಿ ಮೇಲೆ ಫೈರಿಂಗ್ ಮಾಡಲಾಗಿದೆ.
ಕೆಆರ್ ಪುರಂ ಸೀಗೆಹಳ್ಳಿ ಸಮೀಪದ ಹ್ಯಾಪಿ ಗಾರ್ಡನ್ ನಲ್ಲಿ ಘಟನೆ ನಡೆದಿದೆ. ಬಿಲ್ಡರ್ ಅಶೋಕ್ ಮೇಲೆ ಒಂದು ಸುತ್ತಿನ ಗುಂಡಿನ ದಾಳಿ ನಡೆಸಲಾಗಿದೆ. ಕಟ್ಟಡದ ಮಾಲೀಕ ಶಿವಾರೆಡ್ಡಿ ಮೇಲೆ ನಾಲ್ಕೈದು ಸುತ್ತು ಫೈರಿಂಗ್ ಮಾಡಲಾಗಿದೆ.
ಗಂಭೀರವಾಗಿ ಗಾಯಗೊಂಡಿರುವ ಅಶೋಕ್ ಮತ್ತು ಶಿವಾರೆಡ್ಡಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಕೆಆರ್ ಪುರಂ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.