alex Certify ಅಸ್ವಸ್ಥ ಚಾಲಕನನ್ನು ಆಸ್ಪತ್ರೆಗೆ ಸೇರಿಸಿ ಬಳಿಕ ಸ್ವತಃ ಬಿಎಂಟಿಸಿ ಬಸ್ ಚಲಾಯಿಸಿದ ಎಸಿಪಿ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಸ್ವಸ್ಥ ಚಾಲಕನನ್ನು ಆಸ್ಪತ್ರೆಗೆ ಸೇರಿಸಿ ಬಳಿಕ ಸ್ವತಃ ಬಿಎಂಟಿಸಿ ಬಸ್ ಚಲಾಯಿಸಿದ ಎಸಿಪಿ…!

ರಸ್ತೆ ಮಧ್ಯೆ ಅಸ್ವಸ್ಥಗೊಂಡ ಬಸ್ ಚಾಲಕನನ್ನ ಆಸ್ಪತ್ರೆಗೆ ಸೇರಿಸಿದ್ದಲ್ಲದೇ ಸ್ವತಃ ತಾವೇ ಬಸ್ ಚಲಾಯಿಸಿದ ಹಲಸೂರು ಎಸಿಪಿ ರಾಮಚಂದ್ರ ಅವರ ಸಾಮಾಜಿಕ ಕಳಕಳಿ ಬಗ್ಗೆ ಭಾರೀ ಪ್ರಶಂಸೆ ವ್ಯಕ್ತವಾಗ್ತಿದೆ.

ಕಳೆದ ಸೋಮವಾರ ಮತ್ತು ಮಂಗಳವಾರ ಬೆಂಗಳೂರಿನಲ್ಲಿ ವಿಪಕ್ಷಗಳ ಸಭೆ ಹಿನ್ನೆಲೆಯಲ್ಲಿ ಎಸಿಪಿ ರಾಮಚಂದ್ರರನ್ನ ವಿವಿಐಪಿ ಸಂಚಾರವನ್ನು ಸುಗಮವಾಗಿ ನಿರ್ವಹಿಸಲು ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ವಿಶೇಷ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು.

ಮಂಗಳವಾರ ಇದೇ ಮಾರ್ಗದಲ್ಲಿ ಬರ್ತಿದ್ದ ಬಿಎಂಟಿಸಿ ಬಸ್ ಚಾಲಕನಿಗೆ ತೀವ್ರ ಅನಾರೋಗ್ಯ ಉಂಟಾಗಿ ಬಸ್ಸನ್ನು ರಸ್ತೆ ಬದಿ ನಿಲ್ಲಿಸಿದ್ರು. ರೂಟ್ ನಂ. 330ರ ಬಸ್ ಚಾಲಕ ರಸ್ತೆ ಪಕ್ಕದಲ್ಲೇ ಬಸ್ ನಿಲ್ಲಿಸಿದ್ರಿಂದ ವಾಹನ ದಟ್ಟಣೆ ಉಂಟಾಗಿತ್ತು.

ಪರಿಸ್ಥಿತಿಯನ್ನು ಅವಲೋಕಿಸಿದ ನಂತರ ಎಸಿಪಿ ರಾಮಚಂದ್ರ ತಕ್ಷಣವೇ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿದರು. ತಡಮಾಡದೆ ಅವರು ತಕ್ಷಣ ವೈದ್ಯಕೀಯ ಚಿಕಿತ್ಸೆಗಾಗಿ ಅಸ್ವಸ್ಥ ಚಾಲಕನನ್ನು ಬೌರಿಂಗ್ ಆಸ್ಪತ್ರೆಗೆ ಸಾಗಿಸಲು ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿದರು. ಬಳಿಕ ಸ್ವತಃ ಸ್ಟೇರಿಂಗ್ ಹಿಡಿದು ಬಸ್ ಚಲಾಯಿಸಿ ಬಿಎಂಟಿಸಿ ಬಸ್ ಶೆಲ್ಟರ್‌ನಲ್ಲಿ ನಿಲ್ಲಿಸಿದರು.

ಸಂಚಾರದಟ್ಟಣೆ ತಪ್ಪಿಸುವುದರ ಜೊತೆಗೆ ಚಾಲಕನನ್ನ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದರು. ಎಸಿಪಿ ರಾಮಚಂದ್ರ ಅವರು ಬಸ್ ಚಲಾಯಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಅವರ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗ್ತಿದೆ.

— rahil Mohammed (@IMRahilMohammed) July 19, 2023

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...