alex Certify BREAKING: ತಡರಾತ್ರಿ ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ: 50 ಆಟೋಗಳಿಗೆ ಹಾನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ತಡರಾತ್ರಿ ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ: 50 ಆಟೋಗಳಿಗೆ ಹಾನಿ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮು ಮತ್ತು ಪಕ್ಕದ ಶೆಡ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಗೋದಾಮ ಪಕ್ಕದ ಜಾಗದಲ್ಲಿ ನಿಲ್ಲಿಸಿದ್ದ ಆಟೋಗಳು ಬೆಂಕಿಗಾಹುತಿಯಾಗಿವೆ.

ನಾಯಂಡಹಳ್ಳಿ ಸಮೀಪ ಗಂಗೊಂಡನಹಳ್ಳಿ ಬಳಿ ತಡರಾತ್ರಿ ಘಟನೆ ನಡೆದಿದೆ. ಶೆಡ್ ನಲ್ಲಿ ಪಾರ್ಕಿಂಗ್ ಶುಲ್ಕ ನೀಡಿ ಚಾಲಕರು ಆಟೋ ನಿಲ್ಲಿಸಿದ್ದರು. ರಿಜ್ವಾನ್ ಎಂಬುವರಿಗೆ ಸೇರಿದ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಅವಘಡದಲ್ಲಿ ಸುಮಾರು 40 ರಿಂದ 50 ಆಟೋಗಳು ಸುಟ್ಟು ಕರಕಲಾಗಿವೆ. ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...