alex Certify BIG NEWS: ಪತ್ನಿ ಮಾಡಿದ ಕಬಾಬ್ ರುಚಿಯಿಲ್ಲ ಎಂದ ಪತಿ ಆತ್ಮಹತ್ಯೆಗೆ ಶರಣು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪತ್ನಿ ಮಾಡಿದ ಕಬಾಬ್ ರುಚಿಯಿಲ್ಲ ಎಂದ ಪತಿ ಆತ್ಮಹತ್ಯೆಗೆ ಶರಣು

ಬೆಂಗಳೂರು: ಪತಿ-ಪತ್ನಿ ನಡುವಿನ ಕಬಾಬ್ ಜಗಳ ಆತ್ಮಹತ್ಯೆಯಲ್ಲಿ ಅಂತ್ಯವಾಗಿದೆ. ಪತ್ನಿ ಮಾಡಿದ್ದ ಕಬಾಬ್ ರುಚಿಯಿಲ್ಲ ಎಂದು ಕ್ಯಾತೆ ತೆಗೆದಿದ್ದ ಪತಿ ಮಹಾಶಯನೊಬ್ಬ ಪತ್ನಿಯನ್ನು ಹಿಗ್ಗಾ ಮುಗ್ಗಾ ಥಳಿಸಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟದಲ್ಲಿ ನಡೆದಿದೆ.

ಪತ್ನಿ ಶಾಲಿನಿ ಮಾಡಿದ್ದ ಕಬಾಬ್ ಟೇಸ್ಟ್ ಮಾಡಿ ನೋಡಿದ ಪತಿ ಸುರೇಶ್, ಕಬಾಬ್ ಚೆನ್ನಾಗಿ ಬಂದಿಲ್ಲ, ರುಚಿಯಿಲ್ಲ ಎಂದು ಕೋಪಗೊಂಡು ದೊಣ್ಣೆಯಿಂದ ಮನಬಂದಂತೆ ಪತ್ನಿಯನ್ನು ಥಳಿಸಿದ್ದಾನೆ. ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಶಾಲಿನಿ ಪತಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು.

ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಸುರೇಶ್ ಗಾಗಿ ಹುಡುಕಾಟ ನಡೆಸಿದ್ದಾರೆ. ಪೊಲೀಸರು ತನ್ನನ್ನು ಹುಡುಕುತ್ತಿದ್ದಾರೆ ಎಂದು ಗೊತ್ತಾಗುತ್ತಿದ್ದಂತೆ ಭಯಗೊಂಡ ಸುರೇಶ್, ಬನ್ನೇರುಘಟ್ಟದ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...