alex Certify ಪ್ರಯಾಣಿಕರ ಕೊರತೆ ಹಿನ್ನೆಲೆ ಬೆಂಗಳೂರು- ಪಂಢರಾಪುರ ರೈಲು ಸಂಚಾರ ಸ್ಥಗಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಯಾಣಿಕರ ಕೊರತೆ ಹಿನ್ನೆಲೆ ಬೆಂಗಳೂರು- ಪಂಢರಾಪುರ ರೈಲು ಸಂಚಾರ ಸ್ಥಗಿತ

ಬೆಂಗಳೂರು: ಪ್ರಯಾಣಿಕರ ಕೊರತೆ ಹಿನ್ನೆಲೆಯಲ್ಲಿ ಬೆಂಗಳೂರು -ಪಂಢರಾಪುರ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ.

ಎಸ್ಎಂವಿಟಿ ಯಿಂದ ಸಂಚರಿಸುತ್ತಿದ್ದ ಬೆಂಗಳೂರು ಹಾಗೂ ಪಂಢರಾಪುರ ವಿಶೇಷ ರೈಲನ್ನು ಪ್ರಯಾಣಿಕರ ಕೊರತೆ ಕಾರಣಕ್ಕೆ ರದ್ದುಪಡಿಸಿರುವುದಾಗಿ ನೈರುತ್ಯ ರೈಲ್ವೆ ತಿಳಿಸಿದೆ.

ಎಸ್ಎಂವಿಟಿ ಪಂಢರಾಪುರ ಸ್ಪೆಷಲ್ ಎಕ್ಸ್ ಪ್ರೆಸ್ ಜುಲೈ 5, 6, 7ರಂದು, ಪಂಢರಾಪುರ -ಎಸ್ಎಂವಿಟಿ ಬೆಂಗಳೂರು ಸ್ಪೆಷಲ್ ಎಕ್ಸ್ ಪ್ರೆಸ್ ರೈಲು ಜುಲೈ 6, 7, 8ರಂದು ರದ್ದಾಗಿದೆ.

ಸೇಲಂ ವಿಭಾಗದಲ್ಲಿ ಸುರಕ್ಷತಾ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಎರ್ನಾಕುಲಂ -ಕೆಎಸ್ಆರ್ ಬೆಂಗಳೂರು ಇಂಟರ್ ಸಿಟಿ ಎಕ್ಸ್ ಪ್ರೆಸ್ ರೈಲನ್ನು ಸುಮಾರು 20 ದಿನ ಮಾರ್ಗ ಬದಲಾವಣೆ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...