alex Certify Big News: ರಾಜ್ಯದಲ್ಲಿ ಕೈಮೀರಿದ ಕೊರೊನಾ – ಪರಿಸ್ಥಿತಿ ನಿಯಂತ್ರಣದಲ್ಲಿಲ್ಲ ಅಂದ್ರು ಸಿಎಂ ಯಡಿಯೂರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Big News: ರಾಜ್ಯದಲ್ಲಿ ಕೈಮೀರಿದ ಕೊರೊನಾ – ಪರಿಸ್ಥಿತಿ ನಿಯಂತ್ರಣದಲ್ಲಿಲ್ಲ ಅಂದ್ರು ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರು ಮತ್ತು ಸಾವಿನ ಸಂಖ್ಯೆ ಏರಿಕೆಯಾಗಿದ್ದು, ಸೋಂಕಿತರಿಗೆ ಚಿಕಿತ್ಸೆ ನೀಡಲು ರಾಜ್ಯದಲ್ಲಿ ಬೆಡ್, ಐಸಿಯು, ವೆಂಟಿಲೇಟರ್ ಬೆಡ್ ಗಳ ಕೊರತೆ ಕಂಡು ಬಂದಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ದಾಖಲೆಯ ಸಂಖ್ಯೆಯಲ್ಲಿ ಹೊಸ ಪ್ರಕರಣ ಪತ್ತೆಯಾಗಿದ್ದು, ಸಾವಿನ ಸಂಖ್ಯೆಯೂ ಭಾರೀ ಹೆಚ್ಚಳವಾಗಿದೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪರಿಸ್ಥಿತಿ ನಿಯಂತ್ರಣದಲ್ಲಿ ಇಲ್ಲ ಎಂದು ಹೇಳಿದ್ದಾರೆ. ಶುಕ್ರವಾರ ಆರೋಗ್ಯ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಬೆಂಗಳೂರಿನಲ್ಲಿ ವೆಂಟಿಲೇಟರ್ ಹಾಸಿಗೆಗಳನ್ನು 10 ಪಟ್ಟು ಹೆಚ್ಚಳ ಮಾಡುವಂತೆ ಸಿಎಂ ಆದೇಶಿಸಿದ್ದಾರೆ.

ಪ್ರಸ್ತುತ 17 ಸರ್ಕಾರಿ ಆಸ್ಪತ್ರೆಗಳಲ್ಲಿ ಅಧಿಕೃತವಾಗಿ ಕೇವಲ 117 ಐಸಿಯು ವೆಂಟಿಲೇಟರ್ ಹಾಸಿಗೆಗಳು ಇವೆ. ನಗರದಲ್ಲಿ ಕೋವಿಡ್-19 ರೋಗಿಗಳಿಗೆ ಕೋವಿಡ್ ರೋಗಿಗಳಿಗೆ ಇವು ಮೀಸಲಾಗಿವೆ. ಶೇಕಡ 80 ರಷ್ಟು ಹಾಸಿಗೆ ಮೀಸಲಿಡುವಂತೆ ಖಾಸಗಿ ಆಸ್ಪತ್ರೆಗಳಿಗೆ ನಿರ್ದೇಶನ ನೀಡಲಾಗಿದೆ. ಎಲ್ಲಾ ನರ್ಸಿಂಗ್ ಹೋಂಗಳು ಮತ್ತು 30 ಹಾಸಿಗೆಗಳಿಗಿಂತ ಕಡಿಮೆ ಇರುವ ಆಸ್ಪತ್ರೆಗಳಲ್ಲಿ ಕೋವಿಡ್ ಅಲ್ಲದ ರೋಗಿಗಳಿಗೆ ಕಡ್ಡಾಯವಾಗಿ ಚಿಕಿತ್ಸೆ ನೀಡಬೇಕು. 30 ಕ್ಕಿಂತ ಹೆಚ್ಚು ಹಾಸಿಗೆ ಸಾಮರ್ಥ್ಯದ ಎಲ್ಲ ಆಸ್ಪತ್ರೆಗಳು ಶೇಕಡ 80 ರಷ್ಟು ಬೆಡ್ ಮತ್ತು ಐಸಿಯು ಸೌಲಭ್ಯವನ್ನು ರಾಜ್ಯಸರ್ಕಾರಕ್ಕೆ ನೀಡಬೇಕು ಎಂದು ಹೇಳಲಾಗಿದೆ.

ಇದುವರೆಗೆ ಕೇವಲ 50 ರಷ್ಟು ಬೆಡ್ ಗಳನ್ನು ಪಡೆಯಲಾಗುತ್ತಿತ್ತು. ಈಗ ಶೇಕಡ 80 ರಷ್ಟು ಬೆಡ್ ಗಳನ್ನು ನೀಡಬೇಕಿದೆ. ಇನ್ನು 15 ದಿನದಲ್ಲಿ ಕನಿಷ್ಠ ಎರಡು ಸಾವಿರ ತಾತ್ಕಾಲಿಕ ಐಸಿಯು ಬೆಡ್ ಗಳು ಸಿದ್ಧವಾಗಲಿವೆ. ಅವುಗಳಲ್ಲಿ 800 ರಷ್ಟು ಬೆಡ್ ಗಳಿಗೆ ವೆಂಟಿಲೇಟರ್ ವ್ಯವಸ್ಥೆ ಮಾಡಲಾಗುವುದು.

ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ 250 ಐಸಿಯು ಬೆಡ್ ಗಳನ್ನು ಸ್ಥಾಪಿಸಲಾಗುವುದು. ಮತ್ತೊಂದು ಹೊಸ ಕಟ್ಟಡದಲ್ಲಿ 250 ಐಸಿಯು ಬೆಡ್ ವ್ಯವಸ್ಥೆಗೊಳಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

ರಾಜ್ಯದಲ್ಲಿ ಪರಿಸ್ಥಿತಿ ಕೈಮೀರಿರುವ ಹಿನ್ನೆಲೆಯಲ್ಲಿ ಸಾವಿನ ಸಂಖ್ಯೆಯೂ ಹೆಚ್ಚಾಗಿದೆ. ಸೋಂಕಿತರ ಮೃತದೇಹದ ಅಂತ್ಯಸಂಸ್ಕಾರಕ್ಕಾಗಿ ಸ್ಮಶಾನಗಳ ಸಂಖ್ಯೆಯನ್ನು 12 ಕ್ಕೆ ಹೆಚ್ಚಿಸಲಾಗಿದ್ದು, ಬೆಂಗಳೂರು ಸುತ್ತಮುತ್ತ ಭೂಮಿ ಒದಗಿಸಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...