alex Certify BIG NEWS: ಚಲಿಸುತ್ತಿದ್ದ ಆಟೋ ಮೇಲೆ ಬಿದ್ದ ಬೃಹತ್ ಮರ; ಚಾಲಕನ ಸ್ಥಿತಿ ಗಂಭಿರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚಲಿಸುತ್ತಿದ್ದ ಆಟೋ ಮೇಲೆ ಬಿದ್ದ ಬೃಹತ್ ಮರ; ಚಾಲಕನ ಸ್ಥಿತಿ ಗಂಭಿರ

ಬೆಂಗಳೂರು: ಚಲಿಸುತ್ತಿದ್ದ ಆಟೋ ಮೇಲೆ ಬೃಹತ್ ಮರವೊಂದು ಬಿದ್ದು ಅವಘಡ ಸಂಭವಿಸಿರುವ ಘಟನೆ ಬೆಂಗಳೂರಿನ ರಿಚ್ಮಂಡ್ ಸರ್ಕಲ್ ನಲ್ಲಿ ನಡೆದಿದೆ.

ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಆಟೋ ಮೇಲೆ ಬಿರುಗಾಳಿಗೆ ಏಕಾಏಕಿ ಮರ ಮುರಿದು ಬಿದ್ದಿದೆ. ಆಟೋ ಸಂಪೂರ್ಣ ಜಖಂಗೊಂಡಿದ್ದು, ಆಟೋ ಚಾಲಕನ ಎರಡೂ ಕಾಲುಗಳು ಮುರಿದಿವೆ. ಚಾಲಕ ದಿವಾಕರ್ ಎಂಬುವವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅದೃಷ್ಟವಶಾತ್ ಆಟೋದಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಸ್ತೆ ಬದಿಯ ಒಣಗಿದ ಮರಗಳನ್ನು ತೆರವುಗೊಳಿಸುವಂತೆ ಸರ್ಕಾರ ಆದೇಶ ನೀಡಿದ್ದರೂ ಬಿಬಿಎಂಪಿ ಒಣ ಮರಗಳನ್ನು ತೆರವು ಮಾಡದಿರುವುದೇ ಇಂತಹ ಅನಾಹುತಕ್ಕೆ ಕಾರಣವಾಗಿದೆ. ಬಿಬಿಎಂಪಿ ನಿರ್ಲಕ್ಷ್ಯದಿಂದಲೇ ಅವಘಡ ಸಂಭವಿಸಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...