ಬೆಂಗಳೂರು: ಲಿವ್-ಇನ್ ಪಾರ್ಟ್ನರ್ ತನಗೆ ಮೋಸ ಮಾಡಿದ್ದಾನೆ ಎಂದು ಆರೋಪಿಸಿ 29 ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮೃತನನ್ನು ಪರಪ್ಪನ ಅಗ್ರಹಾರ ನಿವಾಸಿ ಅನ್ಬರಸನ್ ಎಂದು ಗುರುತಿಸಲಾಗಿದೆ. ಜನವರಿ 15 ರಂದು ಪರಪ್ಪನ ಅಗ್ರಹಾರದ ಅಪಾರ್ಟ್ಮೆಂಟ್ನಲ್ಲಿ ಅನ್ಬರಸನ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಅನ್ಬರಸನ್ ಸಾವಿನ ನಂತರ ಪೊಲೀಸರು ಅಸ್ವಾಭಾವಿಕ ಸಾವಿನ ವರದಿ (ಯುಡಿಆರ್) ದಾಖಲಿಸಿದ್ದಾರೆ.
ಆಡಿಯೋ ಕಾಲ್ ಆಧರಿಸಿ ಮಗನಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದಿಸಲಾಗಿದೆ ಎಂದು ಅನ್ಬರಸನ್ ಪೋಷಕರು ವಿದ್ಯಾ ಮತ್ತು ಸಂತೋಷ್ ಎಂಬುವವರ ವಿರುದ್ಧ ದೂರು ದಾಖಲಿಸಿದ್ದಾರೆ. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅರ್ಬರಸನ್ ಕಳೆದ ಆರು ತಿಂಗಳಿನಿಂದ ವಿದ್ಯಾ ಎಂಬ ಮಹಿಳೆಯೊಂದಿಗೆ ಲಿವ್-ಇನ್ ಸಂಬಂಧದಲ್ಲಿದ್ದರು. ವಿದ್ಯಾ ತನ್ನ ಪತಿಗೆ ವಿಚ್ಛೇದನ ನೀಡಿ ಚಿಕ್ಕನಾಗಮಂಗಲದಲ್ಲಿ ಅನ್ಬರಸನ್ ಬಾಡಿಗೆಗೆ ಪಡೆದ ಮನೆಯಲ್ಲಿ ವಾಸಿಸಲು ಪ್ರಾರಂಭಿಸಿದರು ಎಂದು ವರದಿಯಾಗಿದೆ. ಸಂತೋಷ್ ಎಂಬ ಇನ್ನೊಬ್ಬ ವ್ಯಕ್ತಿಯೊಂದಿಗೆ ವಿದ್ಯಾ ತನಗೆ ಮೋಸ ಮಾಡುತ್ತಿರುವುದನ್ನು ಅನ್ಬರಸನ್ ಸಾಕ್ಷಿ ಸಮೇತ ಹಿಡಿದಿದ್ದಾನೆ ಎಂದು ಆರೋಪಿಸಲಾಗಿದೆ. ವಿದ್ಯಾ ಅವರೊಂದಿಗೆ ವಾಗ್ವಾದ ನಡೆಸಿದ ನಂತರ ಅರ್ಬರಸನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಅರ್ಬರಸನ್ ಫ್ಲಿಪ್ ಕಾರ್ಟ್ ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು ಮತ್ತು ವಿದ್ಯಾ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.ಅರ್ಬರಸನ್ ಅವರ ತಂದೆ ಎಲುಮಲೈ ಕೃಷ್ಣನ್ ಅವರು ವಿದ್ಯಾ ಮತ್ತು ಸಂತೋಷ್ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ..