alex Certify ಎಚ್ಚರ..! ಮೂತ್ರ ವಿಸರ್ಜನೆ ಮಾಡುವಾಗ ‘ವಿದ್ಯುತ್ ಶಾಕ್’ ತಗುಲಿ ಯುವಕ ಸಾವು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಚ್ಚರ..! ಮೂತ್ರ ವಿಸರ್ಜನೆ ಮಾಡುವಾಗ ‘ವಿದ್ಯುತ್ ಶಾಕ್’ ತಗುಲಿ ಯುವಕ ಸಾವು..!

ಶಿವಮೊಗ್ಗ : ಮೂತ್ರ ವಿಸರ್ಜನೆ ಮಾಡುವಾಗ ವಿದ್ಯುತ್ ಶಾಕ್ ತಗುಲಿ ಯುವಕ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯ ಗವಟೂರಿನ ಹಳೂರು ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಕಾರ್ತಿಕ್ (19) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಮನೆ ಮುಂದೆ ಹಾದು ಹೋಗಿದ್ದ ಐಬೆಕ್ಸ್ ಬೇಲಿ ಬಳಿ ಮೂತ್ರ ವಿಸರ್ಜನೆ ಮಾಡುವಾಗ ಕರೆಂಟ್ ಶಾಕ್ ಹೊಡೆದಿದೆ. ಪರಿಣಾಮ ಕಾರ್ತಿಕ್ ಬೇಲಿ ಮೇಲೆ ಬಿದ್ದಿದ್ದಾರೆ. ಇದನ್ನು ಕಂಡ ಪೋಷಕರು ಕೂಡಲೇ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಅಷ್ಟರಲ್ಲೇ ಯುವಕ ಕಾರ್ತಿಕ್ ಮೃತಪಟ್ಟಿದ್ದಾರೆ.

ಬೇಲಿ ಮೇಲೆ ವಿದ್ಯುತ್ ವೈರ್ ತುಂಡಾಗಿ ಬಿದ್ದಿದ್ದು, ಆದ್ದರಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...