alex Certify ಭಾರತ್ ಬಂದ್: ವಿವಿಧೆಡೆ ಬೆಳ್ಳಂಬೆಳಗ್ಗೆ ಪ್ರತಿಭಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರತ್ ಬಂದ್: ವಿವಿಧೆಡೆ ಬೆಳ್ಳಂಬೆಳಗ್ಗೆ ಪ್ರತಿಭಟನೆ

ಬೆಂಗಳೂರು: ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಭಾರತ ಬಂದ್ ಗೆ ಕರೆ ನೀಡಲಾಗಿದ್ದು, ಬೆಳ್ಳಂಬೆಳಗ್ಗೆ ದಾವಣಗೆರೆ ಸೇರಿದಂತೆ ರಾಜ್ಯದ ಹಲವೆಡೆ ಪ್ರತಿಭಟನೆ ನಡೆಸಲಾಗಿದೆ.

ಮೆಟ್ರೋ, ಬಸ್ ಸೇವೆ ಸೇರಿದಂತೆ ವಾಹನಗಳ ಸಂಚಾರ ಆರಂಭವಾಗಿದೆ. ಬೆಂಗಳೂರಿನ ಸುಮನಹಳ್ಳಿ, ಕೆಆರ್ ಪುರಂನಿಂದ ರ್ಯಾಲಿ ನಡೆಸಲಿದ್ದು, ಸುಮಾರು 8 -10 ಸಾವಿರ ರೈತರು ಭಾಗವಹಿಸಲಿದ್ದಾರೆ. ಜಿಲ್ಲಾ, ತಾಲೂಕು ಕೇಂದ್ರಗಳು ಸೇರಿದಂತೆ ವಿವಿಧೆಡೆ ಪ್ರತಿಭಟನೆ ಕೈಗೊಳ್ಳಲಾಗಿದೆ.

ರೈತರ ಬಂದ್ ಪ್ರತಿಭಟನೆಗೆ ಕಾಂಗ್ರೆಸ್ ಸೇರಿದಂತೆ ಪ್ರಮುಖ ಪಕ್ಷಗಳು, ಸಂಘಟನೆಗಳು ಬೆಂಬಲ ನೀಡಿವೆ. ಕೋವಿಡ್ ನಂತರ ಈಗಷ್ಟೇ ವ್ಯಾಪಾರ ವಹಿವಾಟು ಚೇತರಿಕೆ ಕಾಣುತ್ತಿರುವುದರಿಂದ ಬಹುತೇಕ ಸಂಘಟನೆಗಳು ನೈತಿಕ ಬೆಂಬಲ ನೀಡಿವೆ. ಶಾಲೆ ಕಾಲೇಜು ಸೇರಿ ಬಹುತೇಕ ಚಟುವಟಿಕೆ ಮುಂದುವರೆಯಲಿವೆ. ಬಂದ್ ಗೆ ನಿರೀಕ್ಷಿತ ಬೆಂಬಲ ವ್ಯಕ್ತವಾಗಿಲ್ಲವೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...