alex Certify ತೆಲಂಗಾಣ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆ: ರಾಹುಲ್ ಗಾಂಧಿಗೆ ಅದ್ಧೂರಿ ಸ್ವಾಗತ, ನಾಳೆಯಿಂದ 3 ದಿನ ಬ್ರೇಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತೆಲಂಗಾಣ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆ: ರಾಹುಲ್ ಗಾಂಧಿಗೆ ಅದ್ಧೂರಿ ಸ್ವಾಗತ, ನಾಳೆಯಿಂದ 3 ದಿನ ಬ್ರೇಕ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕೈಗೊಂಡಿರುವ ಭಾರತ್ ಜೋಡೋ ಯಾತ್ರೆ ತೆಲಂಗಾಣ ಪ್ರವೇಶಿಸಿದೆ.

ಗುಡೆಬಲ್ಲೂರು ಮಾರ್ಗವಾಗಿ ಮುಕ್ತಲನಗರಕ್ಕೆ ಭಾರತ್ ಜೋಡೋ ಯಾತ್ರೆ ಪ್ರವೇಶಿಸಿದೆ. ರಾಹುಲ್ ಗಾಂಧಿಯವರಿಗೆ ತೆಲಂಗಾಣ ಕಾಂಗ್ರೆಸ್ ಕಾರ್ಯಕರ್ತರು ಅದ್ದೂರಿ ಸ್ವಾಗತ ನೀಡಿದ್ದಾರೆ.ದೀಪಾವಳಿ ಪ್ರಯುಕ್ತ ನಾಳೆಯಿಂದ ಅಕ್ಟೋಬರ್ 26 ರವರೆಗೂ ಪಾದಯಾತ್ರೆಗೆ ಬಿಡುವು ನೀಡಲಾಗಿದೆ. ಅಕ್ಟೋಬರ್ 27 ರಿಂದ ತೆಲಂಗಾಣದಿಂದ ಪಾದಯಾತ್ರೆ ಪುನರಾರಂಭವಾಗಲಿದೆ.

ಕರ್ನಾಟಕದಲ್ಲಿ ಸುಮಾರು 500 ಕಿಮೀ ಗೂ ಅಧಿಕ ದೂರ ಸಾಗಿದ ಭಾರತ್ ಜೋಡೋ ಯಾತ್ರೆಗೆ ಭಾರಿ ಬೆಂಬಲ ವ್ಯಕ್ತವಾಗಿತ್ತು. ರಾಯಚೂರಿನಲ್ಲಿ ಯಾತ್ರೆ ನಿನ್ನೆ ಮುಕ್ತಾಯವಾದ ಹಿನ್ನಲೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಆತ್ಮೀಯವಾಗಿ ಬೀಳ್ಕೊಡುಗೆ ನೀಡಿದ್ದರು. ಇಂದು ಬೆಳಗ್ಗೆ ಆರಂಭವಾದ ಯಾತ್ರೆ ತೆಲಂಗಾಣ ಪ್ರವೇಶಿಸಿದ್ದು, ರಾಹುಲ್ ಗಾಂಧಿಯವರಿಗೆ ಅದ್ಧೂರಿ ಸ್ವಾಗತ ನೀಡಲಾಗಿದೆ. ಅ. 24 ರಿಂದ 26 ರವರೆಗೆ ಯಾತ್ರೆಗೆ ಬ್ರೇಕ್ ಹಾಕಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...