alex Certify BIG NEWS : ಭೀಮಾ ತೀರದ ‘ರೌಡಿಶೀಟರ್’ ಬರ್ಬರ ಹತ್ಯೆ ಪ್ರಕರಣ : ಮೂವರು ಆರೋಪಿಗಳು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಭೀಮಾ ತೀರದ ‘ರೌಡಿಶೀಟರ್’ ಬರ್ಬರ ಹತ್ಯೆ ಪ್ರಕರಣ : ಮೂವರು ಆರೋಪಿಗಳು ಅರೆಸ್ಟ್

ವಿಜಯಪುರ : ಭೀಮಾ ತೀರದ ರೌಡಿಶೀಟರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಸಂತೋಷ್,  ಮಲ್ಲಿಕಾರ್ಜುನ , ಅನ್ವರ್ ನದಾಫ್ ಎಂಬಾತ ಸೇರಿದಂತೆ  ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜುಲೈ 11 ರಂದು  ಜಿಲ್ಲೆಯ ಆಲಮೇಲ ಸಮೀಪದ ದೇವರನಾವದಗಿ ಗ್ರಾಮದಲ್ಲಿ ರೌಡಿ ಶೀಟರ್ ಮಾಳಪ್ಪ ಯಮನಪ್ಪ ಮೇತ್ರಿ ಎಂಬ ರೌಡಿಶೀಟರ್ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಹಳೇ ದ್ವೇಷಕ್ಕೆ ಈತನನ್ನು ಕೊಲೆ ಮಾಡಲಾಗಿದೆ ಎನ್ನಲಾಗಿತ್ತು, ಪ್ರಕರಣ ಸಂಬಂಧ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಹಾಡಹಗಲೇ ಆಲಮೇಲ ಸಮೀಪದ ದೇವರನಾವದಗಿ ಗ್ರಾಮದಲ್ಲಿ ರೌಡಿ ಶೀಟರ್ ಮಾಳಪ್ಪ ಯಮನಪ್ಪ ಮೇತ್ರಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು.

ಕೊಲೆಯಾದ ಮಾಳಪ್ಪ ಮೇತ್ರಿ ಮೇಲೆ ಶಸ್ತ್ರಾಸ್ತ್ರ ಕಾಯ್ದೆ, ಕಂಟ್ರಿ ಪಿಸ್ತೂಲ್ ಹೊಂದಿರುವ ಹಾಗೂ ಕೊಲೆ ಯತ್ನ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಆತನ ಹೆಸರನ್ನು 2002ರಲ್ಲಿ ರೌಡಿಶೀಟರ್ ಪಟ್ಟಿಯಲ್ಲಿ ಸೇರ್ಪಡೆ ಮಾಡಲಾಗಿತ್ತು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Forskellen mellem de to katte: Kun et geni kunne svare Tre overraskende produkter Et synstestspil: Kan du finde Opskriftshemmeligheder afsløres: Erstatningsmuligheder for salatprodukter "Kun 1 % af