alex Certify ಖರ್ಗೆ ಕಾಂಗ್ರೆಸ್ ಅಧ್ಯಕ್ಷರಾದ್ರೆ ಸೂರ್ಯ ಪಶ್ಚಿಮದಲ್ಲಿ ಹುಟ್ಟಲ್ಲ, ಆಕಾಶ ಕೆಳಗೆ ಬೀಳಲ್ಲ: ಗೋವಿಂದ ಕಾರಜೋಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಖರ್ಗೆ ಕಾಂಗ್ರೆಸ್ ಅಧ್ಯಕ್ಷರಾದ್ರೆ ಸೂರ್ಯ ಪಶ್ಚಿಮದಲ್ಲಿ ಹುಟ್ಟಲ್ಲ, ಆಕಾಶ ಕೆಳಗೆ ಬೀಳಲ್ಲ: ಗೋವಿಂದ ಕಾರಜೋಳ

ಬೀದರ್: ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧ್ಯಕ್ಷರಾದರೆ ಸೂರ್ಯ ಪಶ್ಚಿಮದಲ್ಲಿ ಹುಟ್ಟುವುದಿಲ್ಲ, ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದರೆ ಆಕಾಶವೇನು ಕೆಳಗೆ ಬೀಳುವುದಿಲ್ಲ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.

ಬೀದರ್ ಜಿಲ್ಲೆ ಹುಮ್ನಾಬಾದ್ ತೇರ್ ಮೈದಾನದಲ್ಲಿ ನಡೆದ ಜನಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಮುಳುಗುವ ಹಡಗು. ಮುಳುಗುವ ಹಡಗಿನಲ್ಲಿ ಕೂರಿಸಿ ಮುಳುಗಿಸಲು ಹೊರಟಿದ್ದಾರೆ ಎಂದು ಟೀಕಿಸಿದ್ದಾರೆ.

ಹಿಂದುಳಿದ ವರ್ಗಗಳಿಗೆ ಸಿದ್ದರಾಮಯ್ಯ ಏನನ್ನೂ ಮಾಡಲಿಲ್ಲ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಯಾಕೆ ಮೀಸಲಾತಿ ಹೆಚ್ಚಿಸಲಿಲ್ಲ. ನಮ್ಮ ಸರ್ಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ಮಾಡಿದೆ. ಈಗ ಕಾಂಗ್ರೆಸ್ ನವರು ತಕರಾರು ತೆಗೆಯುವ ಕೆಲಸ ಮಾಡುತ್ತಿದ್ದಾರೆ. ಕೆಲಸಕ್ಕೆ ಬಾರದ ಕೆಂಪಣ್ಣನಿಂದ ಸರ್ಕಾರದ ವಿರುದ್ಧ ಆರೋಪ ಮಾಡಿಸುತ್ತಿದ್ದಾರೆ ಎಂದು ದೂರಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...