alex Certify ಚಿಲ್ಲರೆ ಹಾಗೂ ಸಗಟು ವ್ಯಾಪಾರಿಗಳಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್​ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿಲ್ಲರೆ ಹಾಗೂ ಸಗಟು ವ್ಯಾಪಾರಿಗಳಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್​ ನ್ಯೂಸ್

ದೇಶದಲ್ಲಿ 2.5 ಕೋಟಿಗೂ ಅಧಿಕ ಚಿಲ್ಲರೆ ಹಾಗೂ ಸಗಟು ವ್ಯಾಪಾರಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಈ ವಲಯದ ವ್ಯಾಪಾರಿಗಳನ್ನ ಸಣ್ಣ ಹಾಗೂ ಮಧ್ಯಮ ಉದ್ಯಮಗಳ (ಎಂಎಸ್​ಎಂಇ) ವ್ಯಾಪ್ತಿಗೆ ಸೇರಿಸಲಾಗುವುದು ಎಂದು ಕೇಂದ್ರ ಸರ್ಕಾರ ಮಹತ್ವದ ಮಾಹಿತಿ ನೀಡಿದೆ.

ರಿಸರ್ವ್ ಬ್ಯಾಂಕ್​ ಆಫ್​​ ಇಂಡಿಯಾದ ಮಾರ್ಗಸೂಚಿಗಳ ಅಡಿಯಲ್ಲಿ ಸಾಲ ಸೌಲಭ್ಯಗಳನ್ನ ಪಡೆಯೋದು ಈ ವ್ಯಾಪಾರಿಗಳಿಗೆ ಸುಲಭವಾಗಲಿ ಎಂಬ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಈ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಟ್ವಿಟರ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ನಿತಿನ್​ ಗಡ್ಕರಿ, ಈ ಹಿಂದೆ ಎಂಎಸ್​ಎಂಇ ವ್ಯಾಪ್ತಿಯಿಂದ ಹೊರಗಿದ್ದ ಚಿಲ್ಲರೆ ಹಾಗೂ ಸಗಟು ವ್ಯಾಪಾರಗಳು ಇನ್ಮುಂದೆ ಹೊಸ ಮಾರ್ಗಸೂಚಿಯ ಅನ್ವಯದಂತೆ ಎಂಎಸ್​ಎಂಇ ವ್ಯಾಪ್ತಿಗೆ ಬರಲಿದೆ.

ಕೇಂದ್ರ ಸರ್ಕಾರ ಎಂಎಸ್​ಎಂಇ ಕ್ಷೇತ್ರವನ್ನ ಬಲಪಡಿಸಲು ಯತ್ನಿಸುತ್ತಿದೆ. ಹೀಗಾಗಿಯೇ ಚಿಲ್ಲರೆ ಹಾಗೂ ಸಗಟು ವ್ಯಾಪಾರಿಗಳನ್ನ ಈ ವ್ಯಾಪ್ತಿಗೆ ಸೇರಿಸಲಾಗಿದ್ದು ಇವರಿಗೂ ಆದ್ಯತೆಯ ಆಧಾರದ ಮೇಲೆ ಆರ್​ಬಿಐ ಸೂಚನೆಯಂತೆ ಸಾಲ ಸೌಲಭ್ಯ ದೊರೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

ಕೋವಿಡ್​ 10 ಎರಡನೆ ಅಲೆಯಿಂದ ಚಿಲ್ಲರೆ ಹಾಗೂ ಸಗಟು ವ್ಯಾಪಾರಿಗಳಿಗೆ ಭಾರೀ ಸವಾಲುಗಳು ಎದುರಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಸಂಕಷ್ಟದ ಈ ಸಮಯದಲ್ಲಿ ಆದ್ಯತೆಯ ಆಧಾರದ ಮೇಲೆ ಹಣಕಾಸಿನ ನೆರವು ನೀಡುವುದು ಸರ್ಕಾರದ ಉದ್ದೇಶವಾಗಿದೆ.

 

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...