alex Certify BIG BREAKING: ʼಮಹಾʼ ಬಿಕ್ಕಟ್ಟಿನ ನಡುವೆ ಆಸ್ಪತ್ರೆಗೆ ದಾಖಲಾದ ರಾಜ್ಯಪಾಲರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ʼಮಹಾʼ ಬಿಕ್ಕಟ್ಟಿನ ನಡುವೆ ಆಸ್ಪತ್ರೆಗೆ ದಾಖಲಾದ ರಾಜ್ಯಪಾಲರು

ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ತೀವ್ರವಾಗಿದ್ದು, ಉದ್ದವ್‌ ಠಾಕ್ರೆ ನೇತೃತ್ವದ ರಾಜ್ಯ ಸರ್ಕಾರ ಪತನದಂಚಿಗೆ ಬಂದು ನಿಂತಿದೆ. ಉದ್ದವ್‌ ಸಂಪುಟದ ಸಚಿವ ಏಕನಾಥ ಶಿಂಧೆ 40 ಕ್ಕೂ ಅಧಿಕ ಶಾಸಕರೊಂದಿಗೆ ಗೌಹಾತಿಗೆ ತೆರಳಿದ್ದು, ಯಾವುದೇ ಕ್ಷಣದಲ್ಲಿ ತಮ್ಮ ನಿರ್ಧಾರವನ್ನು ಬಹಿರಂಗಪಡಿಸಲಿದ್ದಾರೆ.

ಹೀಗಾಗಿ ಮುಂಬೈನಲ್ಲಿ ರಾಜಕೀಯ ಚಟುವಟಿಕೆ ಬಿರುಸುಗೊಂಡಿದ್ದು, ಮುಖ್ಯಮಂತ್ರಿ ಉದ್ದವ್‌ ಠಾಕ್ರೆ ತುರ್ತು ಸಚಿವ ಸಂಪುಟ ಸಭೆ ಕರೆದಿದ್ದಾರೆ. ಕಾಂಗ್ರೆಸ್‌ ಸಹ ಶಾಸಕಾಂಗ ಪಕ್ಷದ ಸಭೆ ಕರೆದಿದ್ದು, ಶಾಸಕರೆಲ್ಲರೂ ಈ ಸಭೆಗೆ ಕಡ್ಡಾಯವಾಗಿ ಹಾಜರಾಗುವಂತೆ ಸೂಚಿಸಿದೆ.

ಇದರ ಮಧ್ಯೆ ಪ್ರಸಕ್ತ ರಾಜಕೀಯ ಬಿಕ್ಕಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಬೇಕಿದ್ದ ಮಹಾರಾಷ್ಟ್ರ ರಾಜ್ಯಪಾಲ ಭಗತ್‌ ಸಿಂಗ್‌ ಕೋಶಿಯಾರಿ ಮುಂಬೈನ ಹೆಚ್.ಎನ್.‌ ರಿಲಯನ್ಸ್‌ ಫೌಂಡೇಶನ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಅವರು ಕೋವಿಡ್‌ ಸೋಂಕಿನಿಂದ ಬಳಲುತ್ತಿದ್ದಾರೆನ್ನಲಾಗಿದ್ದು, ಹೀಗಾಗಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆಂದು ಮೂಲಗಳು ತಿಳಿಸಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...