alex Certify BIG BREAKING: ಇಂದೇ ರಾಜೀನಾಮೆ ಕೊಡ್ತಾರಾ ಸಚಿವ ಆನಂದ್ ಸಿಂಗ್…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಇಂದೇ ರಾಜೀನಾಮೆ ಕೊಡ್ತಾರಾ ಸಚಿವ ಆನಂದ್ ಸಿಂಗ್…?

ಬೆಂಗಳೂರು: ಖಾತೆ ಹಂಚಿಕೆ ವಿಚಾರದಲ್ಲಿ ತೀವ್ರ ಅಸಮಾಧಾನಗೊಂಡಿರುವ ಸಚಿವ ಆನಂದ್ ಸಿಂಗ್ ರಾಜೀನಾಮೆಗೆ ನಿರ್ಧರಿಸಿದ್ದು, ಇಂದೇ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ತಮಗೆ ನೀಡಿರುವ ಪರಿಸರ ಹಾಗೂ ಪ್ರವಾಸೋದ್ಯಮ ಖಾತೆ ಬದಲಾಗಿ ಪ್ರಬಲ ಖಾತೆ ನೀಡುವಂತೆ ಪಟ್ಟು ಹಿಡಿದಿರುವ ಆನಂದ್ ಸಿಂಗ್ ಅವರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಹಲವು ಬಾರಿ ಮನವೊಲಿಕೆಗೆ ಯತ್ನಿಸಿದ್ದು, ಕೊಟ್ಟ ಖಾತೆ ನಿಭಾಯಿಸುವಂತೆ ಸಲಹೆ ನೀಡಿದ್ದರು.

ಆದರೂ ಹಠ ಮುಂದುವರೆಸಿರುವ ಆನಂದ್ ಸಿಂಗ್ ದೆಹಲಿಗೆ ತೆರಳಿ ಹೈಕಮಾಂಡ್ ಕೂಡ ಭೇಟಿಯಾಗಿದ್ದರು. ಇಷ್ಟಾದರೂ ತಾವು ಕೇಳಿರುವ ಖಾತೆ ನೀಡಿಲ್ಲ ಎಂಬ ಮುನಿಸು ಆನಂದ್ ಸಿಂಗ್ ಅವರಲ್ಲಿದ್ದು, ರಾಜೀನಾಮೆಗೆ ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

BIG NEWS: ಕಾಂಗ್ರೆಸ್ ಫ್ಯೂಸ್ ತೆಗೆದಿದ್ದೇವೆ; ಕರೆಂಟ್ ಹರಿಯಲೂ ಬಿಡಲ್ಲ ಎಂದ ಕುಮಾರಸ್ವಾಮಿ

ಇಂದು ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಆನಂದ್ ಸಿಂಗ್ ಆಪ್ತ ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...