alex Certify BIG BREAKING: ಗೃಹ ಸಚಿವರ ವಿರುದ್ಧ ಹರ್ಷ ಸಹೋದರಿ ಗಂಭೀರ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಗೃಹ ಸಚಿವರ ವಿರುದ್ಧ ಹರ್ಷ ಸಹೋದರಿ ಗಂಭೀರ ಆರೋಪ

ಶಿವಮೊಗ್ಗ: ಇತ್ತೀಚೆಗೆ ಶಿವಮೊಗ್ಗದಲ್ಲಿ ಹತ್ಯೆಯಾಗಿದ್ದ ಬಜರಂಗದಳ ಕಾರ್ಯಕರ್ತ ಹರ್ಷನ ಸಹೋದರಿ ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ನ್ಯಾಯ ಕೇಳಲು ಹೋದರೆ ಜೋರು ಮಾಡಿ ಬಾಯಿ ಮುಚ್ಚಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹರ್ಷನ ಕೊಲೆ ಆರೋಪಿಗಳಿಗೆ ಪರಪ್ಪನ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ವಿಚಾರವಾಗಿ ಅಪರಾಧಿಗಳಿಗೆ ಜೈಲಿನಲ್ಲಿ ರಾಜಮರ್ಯಾದೆ ನೀಡುತ್ತಿರುವ ಬಗ್ಗೆ ಪ್ರಶ್ನಿಸಲೆಂದು ಹರ್ಷ ಸಹೋದರಿ ಅಶ್ವಿನಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ಭೇಟಿಯಾಗಿ ನ್ಯಾಯ ಕೇಳಿದ್ದಾರೆ. ಈ ರೀತಿಯಾದರೆ ನಮಗೆ ನ್ಯಾಯ ಸಿಗುವುದಾದರೂ ಹೇಗೆ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಸರಿಯಾಗಿ ಸ್ಪಂದಿಸದ ಗೃಹ ಸಚಿವರು ಎಷ್ಟು ಮಾತನಾಡುತ್ತೀಯಮ್ಮ ನೀನು ಎಂದು ಹೇಳಿ ಗದರಿಸಿದ್ದು, ಜೋರು ಮಾಡಿ ವಾಪಸ್ ಕಳುಹಿಸಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಅಶ್ವಿನಿ ನ್ಯಾಯ ಕೇಳಲು ಹೋದರೆ ಗೃಹ ಸಚಿವರು ಜೋರು ಮಾಡಿ ಕಳಿಸಿದ್ದಾರೆ. ಗೃಹ ಸಚಿವರೇ ಹೀಗೆ ಮಾಡಿದರೆ ನಾವು ಎಲ್ಲಿ ಹೋಗಿ ನ್ಯಾಯ ಕೇಳೋಣ. ಎಲ್ಲೂ ನ್ಯಾಯ ಸಿಗಲ್ಲ ಅಂತ ಇಂದು ನನಗೆ ಗೊತ್ತಾಗಿದೆ ಎಂದು ಕಣ್ಣೀರಿಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...