alex Certify BIG BREAKING: ಡಿಸಿಗಳಿಗೆ ಸಿಎಂ ಬೊಮ್ಮಾಯಿ ಖಡಕ್ ವಾರ್ನಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಡಿಸಿಗಳಿಗೆ ಸಿಎಂ ಬೊಮ್ಮಾಯಿ ಖಡಕ್ ವಾರ್ನಿಂಗ್

ಬೆಂಗಳೂರು: ಜಿಲ್ಲಾಧಿಕಾರಿಗಳ ಕಾರ್ಯವೈಖರಿಗಳ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕೆಲಸ ಮಾಡದಿದ್ದರೆ ನಿಮಗೆ ಊಟವಾದರೂ ಯಾಕೆ ಬೇಕು ? ಎಂದು ಖಡಕ್ ಆಗಿ ಪ್ರಶ್ನಿಸಿದ್ದಾರೆ.

ವಿಧಾನಸೌಧದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ, ಜಿಲ್ಲಾ ಪಂಚಾಯತ್ ಸಿಇಒಗಳ ಸಭೆ ನಡೆದಿದ್ದು, ಸಭೆಯ ಆರಂಭದಲ್ಲಿಯೇ ಅಧಿಕಾರಿಗಳಿಗೆ ಸಿಎಂ ಬಿಸಿ ಮುಟ್ಟಿಸಿದ್ದಾರೆ.

ಜಿಲ್ಲೆಗಳಲ್ಲಿ ಕೆಲ ಸಮಸ್ಯೆಗಳು ಆಗಿರುವುದು ಗಮನಕ್ಕೆ ಬಂದಿದೆ. ಸಮಸ್ಯೆ ಬಗೆಹರಿಸುವ ಕೆಲಸ ನಿಮ್ಮಿಂದ ಸರಿಯಾಗಿ ಆಗುತ್ತಿಲ್ಲ, ಅಧಿಕಾರಿಗಳು ಕ್ರಿಯಾಶೀಲರಾಗಿ ಕೆಲಸ ಮಾಡುತ್ತಿಲ್ಲ. ಬೆಳಿಗ್ಗೆ 10 ಗಂಟೆಯಿಂದ ಸಂಜೆ 5ಗಂಟೆಯವರೆಗೆ ಸರ್ಕಾರಿ ಕೆಲಸ ಅನ್ನೋದನ್ನು ಬಿಡಿ. ಜನರ ಕಷ್ಟಸುಖಗಳನ್ನು ಸರಿಯಾಗಿ ಕೇಳಿಸಿಕೊಳ್ಳಿ ಎಂದು ತಿಳಿಸಿದ್ದಾರೆ.

ಜನರ ಸಮಸ್ಯೆ ವಿಷಯದಲ್ಲಿ ರಾಜಿ ಆಗುವ ಪ್ರಶ್ನೆಯೇ ಇಲ್ಲ. ದೀನ ದಲಿತರ, ರೈತರ ಸಮಸ್ಯೆ ಬಗೆಹರಿಸಲು ವಿಳಂಬ ಬೇಡ. ಜಿಲ್ಲಾವಾರು ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು. ಸರ್ಕಾರದ ಯೋಜನೆಗಳು ಫಲಾನುಭವಿಗಳಿಗೆ ತಲುಪಬೇಕು. ಆಡಳಿತ ಬಿಗಿ ಮಾಡಿ. ಕಳಂಕರಹಿತ ಕೆಲಸ ಮಾಡಿ. ಜನರ ತೊಂದರೆ ದೂರ ಮಾಡುವುದು ನಿಮ್ಮ ಕೆಲಸ. ಕೆಲಸ ಮಾಡಿಲ್ಲ ಅಂದ್ರೆ ನಿಮಗೆ ಊಟ ಯಾಕ್ ಬೇಕು? ಎಂದು ಡಿಸಿಗಳಿಗೆ ಸಿಎಂ ಖಡಕ್ ಎಚ್ಚರಿಕೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...