alex Certify BIG BREAKING: ತನಿಖೆ ವೇಳೆ ಸ್ಪೋಟಕ ಮಾಹಿತಿ ಬಾಯ್ಬಿಟ್ಟ ಕನ್ನಯ್ಯ ಲಾಲ್‌ ಹಂತಕರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ತನಿಖೆ ವೇಳೆ ಸ್ಪೋಟಕ ಮಾಹಿತಿ ಬಾಯ್ಬಿಟ್ಟ ಕನ್ನಯ್ಯ ಲಾಲ್‌ ಹಂತಕರು

ಪ್ರವಾದಿ ಮುಹಮ್ಮದ್‌ ಪೈಗಂಬರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ವಕ್ತಾರೆ ನೂಪುರ್‌ ಶರ್ಮಾ ಅವರನ್ನು ಬೆಂಬಲಿಸಿ ಪೋಸ್ಟ್‌ ಹಾಕಿದ್ದರೆಂಬ ಕಾರಣಕ್ಕೆ ರಾಜಸ್ಥಾನದ ಉದಯ್ಪುರದಲ್ಲಿ ಕನ್ನಯ್ಯ ಲಾಲ್‌ ಎಂಬ ಟೈಲರ್‌ ಒಬ್ಬರನ್ನು ಮುಸ್ಲಿಂ ಮೂಲಭೂತವಾದಿಗಳು ಬರ್ಬರವಾಗಿ ಹತ್ಯೆ ಮಾಡಿದ್ದರು.

ಕನ್ನಯ್ಯ ಲಾಲ್‌ ಹತ್ಯೆ ನಡೆದ ಮರುದಿನವೇ ಇಬ್ಬರು ಪ್ರಮುಖ ಆರೋಪಿಗಳನ್ನು ರಾಜಸ್ಥಾನ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ವಿಚಾರಣೆ ವೇಳೆ ಸ್ಪೋಟಕ ಮಾಹಿತಿಗಳನ್ನು ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ.

ಹತ್ಯಾ ಸಂಚಿನಲ್ಲಿ ನಮ್ಮಿಬ್ಬರ ಜೊತೆ ಇನ್ನೂ ಹಲವರು ಇರುವುದಾಗಿ ಹಂತಕರು ಹೇಳಿದ್ದು, ಹತ್ಯೆಗೂ ಮುನ್ನ ಸರಣಿ ಸಭೆಗಳನ್ನು ನಡೆಸಿದ್ದಾಗಿ ಹೇಳಿದ್ದಾರೆನ್ನಲಾಗಿದೆ. ಅಲ್ಲದೇ ತಾವು ಮಾಡುವ ಈ ಕೃತ್ಯ ದೇಶ – ವಿದೇಶದಲ್ಲೂ ದೊಡ್ಡ ಮಟ್ಟದಲ್ಲಿ ಪ್ರಚಾರವಾಗಬೇಕೆಂಬ ಉದ್ದೇಶವನ್ನು ಹಂತಕರು ಹೊಂದಿದ್ದಾಗಿ ತಿಳಿದುಬಂದಿದೆ.

ಇದರ ಮಧ್ಯೆ ಈ ಹತ್ಯೆ ದೇಶದ ಜನತೆಯಲ್ಲಿ ಆಕ್ರೋಶ ಹುಟ್ಟಿ ಹಾಕಿದ್ದು, ದೇಶದಾದ್ಯಂತ ಪ್ರತಿಭಟನೆಗಳನ್ನು ನಡೆಸಿ ಹಂತಕರನ್ನು ಕೂಡಲೇ ಗಲ್ಲಿಗೇರಿಸಿ ಎಂಬ ಆಗ್ರಹ ಕೇಳಿ ಬರುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...