alex Certify BIG BREAKING: ನಟ ದರ್ಶನ್ ವಿರುದ್ಧ ಹಲ್ಲೆ ಆರೋಪ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ನಟ ದರ್ಶನ್ ವಿರುದ್ಧ ಹಲ್ಲೆ ಆರೋಪ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಬೆಂಗಳೂರು: ಚಾಲೇಂಜಿಂಗ್ ಸ್ಟಾರ್ ದರ್ಶನ್ ರಿಂದ ಹಲ್ಲೆ ಆರೋಪ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ನಿರ್ದೇಶಕ ಇಂದ್ರಜಿತ್ ಲಂಕೇಶ್ ಮಾಡುತ್ತಿರುವ ಆರೋಪಗಳು ಸುಳ್ಳು ಎಂದು ಹಲ್ಲೆಗೊಳಗಾಗಿದ್ದಾನೆ ಎನ್ನಲಾದ ವ್ಯಕ್ತಿ ಗೋಪಾಲ್ ರಾಜ್ ಅರಸ್ ಸ್ಪಷ್ಟಪಡಿಸಿದ್ದಾರೆ.

ನಟ ದರ್ಶನ್, ಹೋಟೆಲ್ ಸಪ್ಲೈಯರ್ ಮೇಲೆ ಮಾತ್ರವಲ್ಲ ಇನ್ನಿಬ್ಬರ ಮೇಲೆ ಹಲ್ಲೆ ನಡೆಸಿದ್ದು, ಹಲ್ಲೆಗೊಳಗಾದ ಗೋಪಾಲ್ ರಾಜ್ ಎಂಬ ವ್ಯಕ್ತಿ ಕೋಮಾದಲ್ಲಿದ್ದಾರೆ ಎಂದು ಇಂದ್ರಜಿತ್ ಲಂಕೇಶ್ ಆರೋಪಿಸಿದ್ದರು. ಸ್ವತಃ ಗೋಪಾಲ್ ರಾಜ್ ಇದೀಗ ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ತನ್ನ ಮೇಲೆ ಹಲ್ಲೆ ನಡೆದಿದೆ ಎಂಬುದು ಸುಳ್ಳು ಎಂದಿದ್ದಾರೆ.

ಗಮನಿಸಿ: 3 ಬ್ಯಾಂಕ್ ಶುರು ಮಾಡಿದೆ ಈ ವಿಶೇಷ ಸೌಲಭ್ಯ….!

ದರ್ಶನ್ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬುದು ಸತ್ಯಕ್ಕೆ ದೂರವಾದದ್ದು, ನಾನು ಕೋಮಾದಲ್ಲಿದ್ದೇನೆ ಎಂಬ ಇಂದ್ರಜಿತ್ ಆರೋಪವೂ ಸುಳ್ಳು. ಕಳೆದ 30 ವರ್ಷಗಳಿಂದ ನಾನು ಹಾಗೂ ದರ್ಶನ್ ಸ್ನೇಹಿತರು. ಅವರು ಇಂಡ್ರಸ್ಟ್ರಿಗೆ ಬರುವ ಮೊದಲೇ ನನಗೆ ಆತ್ಮೀಯರು. ನಮ್ಮಿಬ್ಬರ ನಡುವೆ ಯಾವುದೇ ಗಲಾಟೆ ನಡೆದಿಲ್ಲ. ಜು.3ರಂದು ನಾನು ಮೈಸೂರಿನಲ್ಲಿಯೇ ಇದ್ದೆ. ಆದರೆ ದರ್ಶನ್ ಭೇಟಿಯಾಗಿಲ್ಲ. ಕಳೆದ 2-3 ದಿನಗಳ ಹಿಂದಷ್ಟೇ ದರ್ಶನ್ ಅವರನ್ನು ಭೇಟಿಯಾಗಿದ್ದೆ ಎಂದು ತಿಳಿಸಿದ್ದಾರೆ. ಒಟ್ಟಾರೆ 25 ಕೋಟಿ ವಂಚನೆಗೆ ಯತ್ನ ಪ್ರಕರಣ ಹಾಗೂ ಹಲ್ಲೆ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...