alex Certify BIG BREAKING: ನಾನು ಮತ್ತೆ ತಪ್ಪು ಮಾಡಿಲ್ಲ; ಯಾರೋ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ; ಸಿಡಿ ಭೀತಿ ಬಗ್ಗೆ ಬಾಯ್ಬಿಟ್ಟ ರೇಣುಕಾಚಾರ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ನಾನು ಮತ್ತೆ ತಪ್ಪು ಮಾಡಿಲ್ಲ; ಯಾರೋ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ; ಸಿಡಿ ಭೀತಿ ಬಗ್ಗೆ ಬಾಯ್ಬಿಟ್ಟ ರೇಣುಕಾಚಾರ್ಯ

ಬೆಂಗಳೂರು: ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯಗೆ ಸಿಡಿ ಭೀತಿ ಶುರುವಾಗಿದ್ದು, ತಮ್ಮ ವಿರುದ್ಧದ ವಿಡಿಯೋ ಪ್ರಸಾರ ಮಾಡದಂತೆ ಕೋರ್ಟ್ ಮೊರೆ ಹೋಗಿದ್ದು, ಸಿಟಿ ಸಿವಿಲ್ ಕೋರ್ಟ್ ನಿಂದ ವಿಡಿಯೋ ಪ್ರಸಾರ ಮಾಡದಂತೆ ಮಧ್ಯಂತರ ತಡೆಯಾಜ್ನೆಗೆ ಮುಂದಾಗಿದ್ದಾರೆ.

ಸಿಡಿ ಭೀತಿ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿರುವ ರೇಣುಕಾಚಾರ್ಯ, ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ. ನಾನು ಯಾವುದೇ ತಪ್ಪು ಮಾಡಿಲ್ಲ. ಯಾರೋ ಪುಣ್ಯಾತ್ಮ ರೇಣುಕಾಚಾರ್ಯ ವಿಡಿಯೋ ಎಂದು ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ಎಡಿಟಿಂಗ್ ಮೂಲಕ ಒಬ್ಬರ ಮುಖವನ್ನು ಮತ್ತೊಬ್ಬರಿಗೆ ಜೋಡಿಸಬಹುದು. ಈ ರೀತಿ ಮಾಡಿ ನನ್ನನ್ನು ಬ್ಲಾಕ್ ಮೇಲ್ ಖೆಡ್ಡಾಗೆ ಕೆಡವುವ ಯತ್ನ ನಡೆದಿದೆ ಎಂದಿದ್ದಾರೆ.

BIG NEWS: ಗಡಿ ಜಿಲ್ಲೆಗಳಲ್ಲಿ ಹೈ ಅಲರ್ಟ್; ಇನ್ಮುಂದೆ ಕೋವಿಡ್ ರಿಪೋರ್ಟ್, 2ಡೋಸ್ ವ್ಯಾಕ್ಸಿನ್ ಕಡ್ಡಾಯ

ನನ್ನ ವಿರುದ್ಧದ ವಿಡಿಯೋ ಪ್ರಸಾರ ಮಾಡದಂತೆ ಕೋರ್ಟ್ ಮೊರೆ ಹೋಗಿದ್ದೇನೆ. ನಾನು ಹಿಂದೊಮ್ಮೆ ತಪ್ಪು ಮಾಡಿದ್ದೆ. ಅಂದಿನ ತಪ್ಪಿನಿಂದ ಪಾಠ ಕಲಿತಿದ್ದೇನೆ. ನಡೆಯುವ ಮನುಷ್ಯ ಎಡವುದು ಸಹಜ. ಮತ್ತೆಂದೂ ಆ ತಪ್ಪು ಮಾಡಿಲ್ಲ. ಇಂತಹ ಕೀಳು ಮಟ್ಟದ ರಾಜಕಾರಣ ಯಾರೂ ಸಹಿಸಲ್ಲ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...